ಶಾರುಖ್ ‘ರಯೀಸ್’ ಪ್ರಚಾರದ ವೇಳೆ ಅವಘಡ: ಕಾಲ್ತುಳಿತಕ್ಕೆ ಓರ್ವ ಬಲಿ
Team Udayavani, Jan 24, 2017, 9:10 AM IST
ವಡೋದರಾ : ಇಲ್ಲಿ ನ ರೈಲ್ವೇ ನಿಲ್ದಾಣದಲ್ಲಿ ರಯೀಸ್ ಚಿತ್ರದ ಪ್ರಚಾರಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರು ಆಗಮಿಸಿದ್ದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಓರ್ವ ಅಭಿಮಾನಿ ಸಾವನ್ನಪ್ಪಿ, ಹಲವರು ಗಾಯಗೊಂಡ ದುರ್ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ರೈಲಿನಲ್ಲಿ ನಿಲ್ದಾಣಕ್ಕೆ ಬರುತ್ತಿದ್ದ ಶಾರುಖ್ ಖಾನ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ದು ,ಪೊಲೀಸರು ಜನರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದು ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಅವಘಡದಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸದ್ಯ ಚಿತ್ರದ ಪ್ರಚಾರಕ್ಕಾಗಿ ಅಗಸ್ತ್ ಕಾಂತ್ರಿ ಎಕ್ಸ್ಪ್ರೆಸ್ ರೈಲಿನಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿರುವ ಶಾರುಖ್ ಖಾನ್ ಅವರು ರೈಲು ನಿಲ್ದಾಣಗಳಲ್ಲಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ಶಾರುಖ್ರ ಬಹು ನಿರೀಕ್ಷಿತ ಚಿತ್ರ ಜನವರಿ 25 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ರಾಹುಲ್ ಢೋಲಾಕಿಯಾ ನಿರ್ದೇಶಿಸಿರುವ ಚಿತ್ರದಲ್ಲಿ ನಾವಾಜುದ್ದೀನ್ ಸಿದ್ಧಿಕಿ, ಮಾಹಿರಾ ಖಾನ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್