ಉತ್ತರ ಭಾರತದಲ್ಲಿ ಕಂಪಿಸಿದ ಭೂಮಿ:ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ
Team Udayavani, Feb 7, 2017, 10:13 AM IST
ಹೊಸದಿಲ್ಲಿ: ಸೋಮವಾರ ರಾತ್ರಿ 10.30 ರ ವೇಳೆಗೆ ಉತ್ತರ ಭಾರತದಲ್ಲಿ ಭೂಕಂಪನ ಸಂಭವಿಸಿದ್ದು, ಉತ್ತಾರಖಂಡ,ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಷ್ಟ್ರರಾಜಧಾನಿ ದೆಹಲಿ ಸುತ್ತಮುತ್ತಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿತ್ತು.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬೆರೋನ್ ಬಸ್ತಿ ಹಾಟ್ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಇತ್ತು ಎಂದು ಹೇಳಲಾಗಿದೆ. ರುದ್ರಪ್ರಯಾಗಕ್ಕೆ ಕೇಂದ್ರ ಸರ್ಕಾರ ಎನ್ಡಿಆರ್ಎಫ್ನ
ಎರಡು ತುಕಡಿ ಕಳುಹಿಸಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಭೂಕಂಪ ಬಗ್ಗೆ ಅಧಿಕಾರಿಗಳ ಜತೆ ಮಾತಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಇದುವರೆಗೆ ಯಾವುದೇ ಸಾವು ನೋವು, ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ