ಅಮೆರಿಕದಲ್ಲಿ ಕಾರುಕಳ್ಳನಿಂದ ತೆಲಂಗಾಣದ ವಿದ್ಯಾರ್ಥಿಯ ಗುಂಡಿಕ್ಕಿಹತ್ಯೆ


Team Udayavani, Feb 13, 2017, 11:03 AM IST

Vamshi Reddy-700.jpg

ವಾರಂಗಲ್‌ : ತೆಲಂಗಾಣದ ವಾರಂಗಲ್‌ ಜಿಲ್ಲೆಯ ನಿವಾಸಿಯಾಗಿರುವ 26ರ ಹರೆಯದ ವಂಶಿ ಚಂದರ್‌ ರೆಡ್ಡಿ ಯನ್ನು  ಅಮೆರಿಕದ ಕ್ಯಾಲಿಫೋರ್ನಿಯದ ಸಾಂತಾ ಕ್ಲಾರಾದ ಮಿಲ್‌ಪಿಟಾಸ್‌ ಎಂಬಲ್ಲಿ ಕಾರುಕಳ್ಳನೋರ್ವ ಗುಂಡಿಕ್ಕಿ ಸಾಯಿಸಿರುವುದಾಗಿ ತಿಳಿದು ಬಂದಿದೆ.

ಈ ಘಟನೆ ಕಳೆದ ಶನಿವಾರ ಸಂಭವಿಸಿರುವುದಾಗಿ ವಂಶಿ ರೆಡ್ಡಿಯ ತಂದೆ ನಿನ್ನೆ ಭಾನುವಾರ ತಿಳಿಸಿದ್ದಾರೆ. ಮಿಲ್‌ಪಿಟಾಸ್‌ನಲ್ಲಿ ನ ಸ್ಟೋರ್‌ ಒಂದರಲ್ಲಿ ತನ್ನ ಅಂಶಕಾಲಿಕ ಕೆಲಸವನ್ನು ಪೂರೈಸಿ ಮನೆಗೆ ಮರಳುತ್ತಿದ್ದ ವೇಳೆ ತನ್ನ ಪುತ್ರ ವಂಶಿ ರೆಡ್ಡಿಯನ್ನು  ಕಾರು ಕಳ್ಳ ಹಂತಕನು ಗುಂಡಿಕ್ಕಿ ಕೊಂದಿರುವುದಾಗಿ ಅವರು ಹೇಳಿದರು. 

ವಂಶಿ ಚಂದರ್‌ ರೆಡ್ಡಿ 2013ರಲ್ಲಿ ಕ್ಯಾಲಿಫೋರ್ನಿಯಕ್ಕೆ ತೆರಳಿ ಸಿಲಿಕಾನ್‌ ವ್ಯಾಲಿ ಯುನಿವರ್ಸಿಟಿಯಲ್ಲಿ ತನ್ನ ಎಂಎಸ್‌ ಶಿಕ್ಷಣವನ್ನು ಪೂರೈಸಿ ಅಲ್ಲಿನ ಐಟಿ ರಂಗದಲ್ಲಿ ಉದ್ಯೋಗದಲ್ಲಿ ತೊಡಗಿಕೊಳ್ಳಲು ಬಯಸಿದ್ದರು. 

ವಂಶಿ ನಾಪತ್ತೆಯಾಗಿರುವುದಾಗಿ ಮೊದಲು ಆತನ ಸ್ನೇಹಿತರು ನನಗೆ ಫೋನ್‌ ಮಾಡಿ ತಿಳಿಸಿದ್ದರು. ಅನಂತರದಲ್ಲಿ ಅವರು ವಂಶಿಯನ್ನು ಕಾರುಕಳ್ಳ ಹಂತಕನೋರ್ವ ಗುಂಡಿಕ್ಕಿ ಕೊಂದಿರುವುದಾಗಿ ತಿಳಿಸಿದರು ಎಂದು ವಂಶಿ ಚಂದರ್‌ ರೆಡ್ಡಿಯ ತಂದೆ  ಸಂಜೀವ್‌ ರೆಡ್ಡಿ ಅವರು ನಿನ್ನೆ ಭಾನುವಾರ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. ಎರಡು ದಿನಗಳ ಹಿಂದಷ್ಟೇ ತಮ್ಮ ಮಗ ತಮ್ಮೊಂದಿಗೆ ಫೋನಿನಲ್ಲಿ ಮಾತನಾಡಿರುವುದಾಗಿ ಅವರ ದುಃಖತಪ್ತರಾಗಿ ಹೇಳಿದರು. 

ಈ ನಡುವೆ ವಿಷಯ ತಿಳಿದ ವಾರಂಗಲ್‌ ಶಾಸಕ ಅರೂರಿ ರಮೇಶ್‌ ಅವರು ಸಂಜೀವ್‌ ರೆಡ್ಡಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. 

ತನ್ನ ಹತ ಪುತ್ರನ ಶವವನ್ನು ಆದಷ್ಟು ಬೇಗನೆ ಸ್ವದೇಶಕ್ಕೆ ತರಿಸುವಲ್ಲಿ ನರವಾಗಬೇಕೆಂದು ಸಂಜೀವ್‌ ರೆಡ್ಡಿ ಅವರು ತೆಲಂಗಾಣ ಮತ್ತು ಕೇಂದ್ರ ಸರಕಾರವನ್ನು ಕೋರಿದ್ದಾರೆ. ಶಾಸಕ ಅರೂರಿ ಅವರು ಈ ನಿಟ್ಟಿನಲ್ಲಿ ತಮ್ಮಿಂದಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.