ಆ್ಯಪ್‌ನಲ್ಲೇ ಪ್ಯಾನ್‌ಕಾರ್ಡ್‌, ಆಧಾರ್‌ ಜೋಡಣೆಯಿಂದ ನಿಮಿಷದಲ್ಲೇ ಲಭ್ಯ


Team Udayavani, Feb 16, 2017, 3:45 AM IST

pan.jpg

ನವದೆಹಲಿ: ಪರ್ಮನೆಂಟ್‌ ಅಕೌಂಟ್‌ ನಂಬರ್‌, ಸರಳವಾಗಿ ಹೇಳುವುದಾದರೆ ಪ್ಯಾನ್‌ ಕಾರ್ಡನ್ನು ಸುಲಭವಾಗಿ ಪಡೆದುಕೊಳ್ಳುವುದು ಹೇಗಪ್ಪಾ ಎಂಬ ಚಿಂತೆಯಲ್ಲಿ ಕೊರಗುತ್ತಿದ್ದೀರಾ? ನಿಮ್ಮ ಚಿಂತೆ ನಿವಾರಣೆ ಮಾಡಲು ಕೇಂದ್ರಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಇನ್ನು ನಿಮ್ಮ ಸ್ಮಾರ್ಟ್‌ಫೋನ್‌ ಬಳಸಿ ಪ್ಯಾನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು,
ಕೆಲವೇ ನಿಮಿಷದಲ್ಲಿ ಪ್ಯಾನ್‌ ಸಂಖ್ಯೆಯನ್ನೂ ಪಡೆಯಬಹುದು! ಕೇಂದ್ರ ವಿತ್ತ ಸಚಿವಾಲಯ ಮೊಬೈಲ್‌ ಆ್ಯಪೊಂದನ್ನು ಸಿದ್ಧಪಡಿಸುತ್ತಿದೆ. ಇದನ್ನು ಡೌನ್‌ಲೋಡ್‌ ಮಾಡಿಕೊಂಡರೆ ಸಾಕು ಹಲವು ಕೆಲಸಗಳು ಸುಲಭವಾಗಲಿದೆ.

ಈ ಆ್ಯಪ್‌ ಮೂಲಕ ನೀವು ನೇರವಾಗಿ ತೆರಿಗೆ ಪಾವತಿ ಮಾಡಬಹುದು, ತಕ್ಷಣವೇ ಪ್ಯಾನ್‌ ಸಂಖ್ಯೆ ಬೇಕೆಂದರೆ ಅದನ್ನೂ ಪಡೆಯಬಹುದು ಅಥವಾ ಪ್ಯಾನ್‌ ಕಾರ್ಡ್‌ಗೆ ಅರ್ಜಿಯನ್ನು ಗುಜರಾಯಿಸಬಹುದು. ಆದರೆ ಈ ಆ್ಯಪ್‌ ಸಿದ್ಧತೆ
ಹಂತದಲ್ಲಿರುವುದರಿಂದ ಗ್ರಾಹಕರು ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಹೇಗೆ ಸಾಧ್ಯ?: ಬರಲಿರುವ ಹೊಸ ಆ್ಯಪ್‌ಗೆ ಆಧಾರ್‌ ಸಂಖ್ಯೆ ಆಧಾರಿತ ಇ-ಕೆವೈಸಿ ಸೌಲಭ್ಯವನ್ನು ಜೋಡಿಸಲಾಗಿದೆ. ಇ-ಕೆವೈಸಿಯಲ್ಲಿ ನೀವು ಆಧಾರ್‌ಗೆ ನೀಡಿರುವ ಜನ್ಮದಿನ, ವಿಳಾಸ, ಬೆರಳಚ್ಚು ಮಾಹಿತಿಗಳು ಲಭ್ಯವಿರುತ್ತದೆ.  ನೂತನ ಆ್ಯಪ್‌ ಬಳಸಿ ಪಾನ್‌ ಸಂಖ್ಯೆ ಪಡೆಯಲು ಯತ್ನಿಸುವಾಗ ನಿಮ್ಮ ವಿಳಾಸ, ಜನ್ಮದಿನ ಇವನ್ನು ಇ-ಕೆವೈಸಿ ಮೂಲಕ ಖಚಿತಪಡಿಸಬಹುದು. ಜೊತೆಗೆ ನಿಮ್ಮ ಬೆರಳಚ್ಚನ್ನು ನೀಡಬಹುದು. ಆಧಾರ್‌ನಲ್ಲಿ ನಿಮ್ಮ ಬೆರಳಚ್ಚು ಇರುವುದರಿಂದ ಕೂಡಲೇ ಆ್ಯಪ್‌ ಅದನ್ನು ಒಪ್ಪಿಕೊಳ್ಳುತ್ತದೆ.

ಏಕೆ ಈ ಕ್ರಮ?: ಇತ್ತೀಚೆಗೆ ಕೇಂದ್ರ ಸರ್ಕಾರ ನೋಟು ಅಪನಗದೀಕರಣ ಮಾಡಿದ ನಂತರ 50,000 ರೂ.ಗಿಂತ ಹೆಚ್ಚಿನ ಹಣ ಹಿಂಪಡೆಯಲು, 2 ಲಕ್ಷ ರೂ.ಗಿಂತ ಜಾಸ್ತಿ ಮೌಲ್ಯದ ಖರೀದಿ ಮಾಡಲು ಪಾನ್‌ಕಾರ್ಡ್‌ ಸಂಖ್ಯೆ ಬೇಕೇ ಬೇಕು ಎಂದು ನಿಗದಿ ಮಾಡಿದೆ. ಆದ್ದರಿಂದ ಪಾನ್‌ ಸಂಖ್ಯೆಗೆ ಬೇಡಿಕೆ ಹೆಚ್ಚಿದೆ. ಇದಕ್ಕೆ ಸ್ಪಂದಿಸಲು ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ. ವಿಶೇಷವೆಂದರೆ ದೇಶದಲ್ಲಿ 111 ಕೋಟಿ ಮಂದಿ ಆಧಾರ್‌ ಕಾರ್ಡ್‌ ಹೊಂದಿದ್ದಾರೆ.

ಆದರೆ ಪಾನ್‌ ಸಂಖ್ಯೆ ಹೊಂದಿರುವವರು 25 ಕೋಟಿ ಮಂದಿ ಮಾತ್ರ. ಈ ಆ್ಯಪ್‌ ಮೂಲಕ ಪಾನ್‌ ಪಡೆಯುವುದನ್ನು ಸಲೀಸು ಮಾಡಿದರೆ ತೆರಿಗೆ ಪಾವತಿದಾರರು ಸುಲಭವಾಗಿ ಪಾನ್‌ ಪಡೆಯುತ್ತಾರೆ, ಜೊತೆಗೆ ತೆರಿಗೆ ವ್ಯಾಪ್ತಿಗೆ ಬರುತ್ತಾರೆ ಎನ್ನುವುದು ಲೆಕ್ಕಾಚಾರ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.