ಶಾಸಕ ಮುಖ್ತಾರ್ ಅನ್ಸಾರಿ ಪೆರೋಲ್ಗೆ ದಿಲ್ಲಿ ಹೈಕೋರ್ಟ್ ತಡೆ
Team Udayavani, Feb 27, 2017, 12:01 PM IST
ಹೊಸದಿಲ್ಲಿ : ಉತ್ತರ ಪ್ರದೇಶ ಚುನಾವಣಾ ಪ್ರಚಾರ ಕೈಗೊಳ್ಳಲು ಶಾಸಕ ಮುಖ್ತಾರ್ ಅನ್ಸಾರಿಗೆ ವಿಚಾರಣಾ ನ್ಯಾಯಾಲಯವು ಮಂಜೂರು ಮಾಡಿದ್ದ ಪೆರೋಲ್ಗೆ ದಿಲ್ಲಿ ಹೈಕೋಟ್ ತಡೆ ನೀಡಿದೆ.
ಅನ್ಸಾರಿ ಅವರು 2005ರಲ್ಲಿ ನಡೆದಿದ್ದ ಬಿಜೆಪಿ ಶಾಸಕ ಕೃಷ್ಣಾನಂದ ರಾಯ್ ಅವರ ಕೊಲೆ ಪ್ರಕರಣದ ಆರೋಪಿಯಾಗಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಶಾಸಕ ಅನ್ಸಾರಿಗೆ ನೀಡಲಾಗಿದ್ದ ಪೆರೋಲ್ ಅನ್ನು ರದ್ದುಪಡಿಸುವಂತೆ ಚುನಾವಣಾ ಆಯೋಗ ಮಾಡಿಕೊಂಡಿದ್ದ ಮನವಿಯನ್ನು ದಿಲ್ಲಿ ಹೈಕೋರ್ಟಿನ ಜಸ್ಟಿಸ್ ಮುಕ್ತಾ ಗುಪ್ತಾ ಅವರು ಪುರಸ್ಕರಿಸಿ, ಪೆರೋಲ್ ರದ್ದು ಪಡಿಸಿದರು.
ಈಚೆಗಷ್ಟೇ ಬಹುಜನ ಸಮಾಜ ಪಕ್ಷವನ್ನು ಸೇರಿಕೊಂಡಿದ್ದ ಶಾಸಕ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು , ಚುನಾವಣಾ ಪ್ರಚಾರ ಕೈಗೊಳ್ಳುವುದಕ್ಕಾಗಿ ಅವರಿಗೆ ವಿಚಾರಣಾ ನ್ಯಾಯಾಲಯವು ಮಾರ್ಚ್ 4ರ ವರೆಗಿನ ಅವಧಿಗೆ ಪೆರೋಲ್ ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ