ತ್ರಿಪುರದಲ್ಲಿ ಟಿಎಂಸಿ – ಬಿಜೆಪಿ ಕಾದಾಟದಲ್ಲಿ 17 ಮಂದಿಗೆ ಗಾಯ
Team Udayavani, Mar 14, 2017, 3:06 PM IST
ಅಗರ್ತಲಾ : ಎರಡು ಗುಂಪುಗಳ ಒಳಗೆ ನಡೆದ ಕಾದಾಟದಲ್ಲಿ ಒಟ್ಟು ಹದಿನೇಳು ಮಂದಿ ಗಾಯಗೊಂಡಿದ್ದು ಇವರಲ್ಲಿ 11 ಪೊಲೀಸರು, ಇಬ್ಬರು ಛಾಯಾಚಿತ್ರ ಪತ್ರಕರ್ತರು ಮತ್ತು ಟಿಎಂಸಿ ಹಾಗೂ ಬಿಜೆಪಿಯ ತಲಾ ಇಬ್ಬರು ಕಾರ್ಯಕರ್ತರು ಸೇರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಿಎಂಸಿ ನಾಯಕ ಸುದೀಪ್ ರಾಯ್ ಬರ್ಮನ್ ಅವರ ಹಿರಿಯ ಸಹೋದರ ಸಂದೀಪ್ ರಾಯ್ ಬರ್ಮನ್ ಅವರು ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹೊಡೆದರೆಂಬ ಕಾರಣಕ್ಕೆ ಕಾದಾಟ ಉಂಟಾಯಿತು.
ಎರಡೂ ಪಕ್ಷಗಳ ಬೆಂಬಲಿಗರು ಪಶ್ಚಿಮ ಅಗರ್ತಲಾ ಪೊಲೀಸ್ ಠಾಣೆಗೆ ನಿನ್ನೆ ರಾತ್ರಿ ಎಫ್ಐಆರ್ ದಾಖಲಿಸಲು ಬಂದಿದ್ದಾಗ ಉಭಯ ಗುಂಪುಗಳ ನಡುವೆ ಕಾದಾಟ ಆರಂಭವಾಯಿತು. ಇದರಲ್ಲಿ ಮಧ್ಯಪ್ರವೇಶಿಸಿದ ಹನ್ನೊಂದು ಮಂದಿ ಪೊಲೀಸ್ ಸಿಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾದವು.
ಕಾದಾಟದಲ್ಲಿ ಬಿಜೆಪಿ ಉಪಾಧ್ಯಕ್ಷ ಸುಬಲ್ ಭೌಮಿಕ್ ಮತ್ತು ಟಿಎಂಸಿ ನಾಯಕ ಪನ್ನಾ ದೇಬ್ ಸೇರಿದಂತೆ ಬಿಜೆಪಿ ಹಾಗೂ ಟಿಎಂಸಿಯ ನಾಲ್ವರು ಕಾರ್ಯಕರ್ತರು ಗಾಯಗೊಂಡರು ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ