ಗೋವಾ: ಸಿಎಂ ಆಗಿ ಪಾರೀಕರ್‌ ಪ್ರಮಾಣ


Team Udayavani, Mar 15, 2017, 6:20 AM IST

15-PTI-2.jpg

ಪಣಜಿ/ಹೊಸದಿಲ್ಲಿ: ಜನರ ತೀರ್ಪು ನಮ್ಮ ಕಡೆ ಇದೆ ಎಂಬ ಆರೋಪ, ಬಹುಮತ ನಮಗಿದೆ ಎಂಬ ವಿಶ್ವಾಸ, ನ್ಯಾಯಾಲಯದ ಆದೇಶ ಮತ್ತಿತರ ಗೊಂದಲಗಳ ನಡುವೆಯೇ ಗೋವಾದ ನೂತನ ಸಿಎಂ ಆಗಿ ಮನೋಹರ್‌ ಪಾರೀಕರ್‌ ಅವರು ಮಂಗಳವಾರ ಸಂಜೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.

ಪಾರೀಕರ್‌  ಜತೆಗೆ ಇತರ 9 ಮಂದಿ ಸಚಿವರಿಗೂ ರಾಜ್ಯಪಾಲ ರಾದ ಮೃದುಲಾ ಸಿನ್ಹಾ ಪ್ರಮಾಣ ವಚನ ಬೋಧಿಸಿದ್ದಾರೆ. ಇದಕ್ಕೂ ಮೊದಲು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದ ಕಾಂಗ್ರೆಸ್‌ಗೆ ಅಲ್ಲೂ ಹಿನ್ನಡೆಯಾಗಿತ್ತು.

ಪಾರೀಕರ್‌  ಪ್ರಮಾಣ ಸ್ವೀಕಾರಕ್ಕೆ ತಡೆಯಾಜ್ಞೆ ತರಲು ನಿರಾಕರಿಸಿದ್ದ ನ್ಯಾಯಾಲಯ, ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಬಿಜೆಪಿಗೆ ಸೂಚಿಸಿತು. ಜತೆಗೆ, ರಾಜ್ಯಪಾಲರಿಗೆ ಸರಕಾರ ರಚನೆಗೆ ಹಕ್ಕು ಮಂಡಿಸದ ಹಾಗೂ ಬೆಂಬಲಿತ ಶಾಸಕರ ಅಫಿದವಿತ್‌ ಇಲ್ಲದೇ ನ್ಯಾಯಾಲಯದ ಮೆಟ್ಟಿಲೇರಿದ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡಿತು. ಇದರಿಂದಾಗಿ ಬಿಜೆಪಿ ನಿಟ್ಟುಸಿರು ಬಿಟ್ಟಿತಲ್ಲದೆ, 4ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕರಿಸುವ ಪಾರೀಕರ್‌  ಹಾದಿ ಸುಗಮವಾಯಿತು.

ಸಂಜೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಗೋವಾದ ಮಾಜಿ ಸಿಎಂ ಲಕ್ಷ್ಮೀಕಾಂತ್‌ ಪರ್ಶೇಕರ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮತ್ತಿತರ ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮೊದಲು, ಗೋವಾ ರಾಜಭವನದ ಮುಂದೆ ಕೆಲವು ನಾಗರಿಕರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. 

ಇನ್ನೊಂದೆಡೆ, ಸುಪ್ರೀಂ ಆದೇಶವನ್ನು ಸ್ವಾಗತಿಸಿದ ಬಿಜೆಪಿ, ಸರಕಾರ ರಚಿಸಲು ಬೇಕಾದಷ್ಟು ಸಂಖ್ಯಾಬಲ ನಮ್ಮಲ್ಲಿದೆ. ಹಾಗಾಗಿ, ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗುತ್ತೇವೆಂಬ ನಂಬಿಕೆಯಿದೆ ಎಂದಿದೆ. ಆದರೆ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಮಾತನಾಡಿ, “ರಜೆಯ ನಡುವೆಯೂ ನಮ್ಮ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ನ್ಯಾಯಾಲಯದ ಆದೇಶವು ನಮಗೆ ಸಿಕ್ಕ ಅತಿದೊಡ್ಡ ಜಯ. 2 ದಿನಗಳ ಸಿಎಂ ಆಗಲು ಹೊರಟಿರುವ ಮನೋಹರ್‌ ಪಾರೀಕರ್‌ಗೆ ಸ್ವಾಗತ,’ ಎನ್ನುವ ಮೂಲಕ ವಿಶ್ವಾಸಮತದ ವೇಳೆ ಕಾಂಗ್ರೆಸ್‌ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮಣಿಪುರದಲ್ಲೂ  ಬಿಜೆಪಿ ಸರಕಾರ?
ಗೋವಾದಲ್ಲಿ ಸರಕಾರ ರಚಿಸಲು ಬಿಜೆಪಿ ಯಶಸ್ವಿಯಾಗುತ್ತಿದ್ದಂತೆಯೇ ಅತ್ತ ಮಣಿಪುರದಲ್ಲೂ ಕಾಂಗ್ರೆಸ್‌ಗೆ ಸೋಲಾಗಿದೆ. ಬಿಜೆಪಿಯು ತನಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡ ಹಿನ್ನೆಲೆಯಲ್ಲಿ ಮಣಿಪುರ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ಅವರು ಸರಕಾರ ರಚನೆಗೆ ಆಹ್ವಾನಿಸಿದ್ದಾರೆ. ಅದರಂತೆ, ಬಿಜೆಪಿ ನಾಯಕ ಎನ್‌. ಬಿರೇನ್‌ ಸಿಂಗ್‌ ಅವರು ಬುಧವಾರ ಅಪರಾಹ್ನ 1 ಗಂಟೆಗೆ ಮಣಿಪುರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜಭವನದ ಪ್ರಕಟನೆ ತಿಳಿಸಿದೆ. ಈ ಬೆಳವಣಿಗೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್‌, “ರಾಜ್ಯಪಾಲರು ಗಳು ಕೇಂದ್ರ ಸರಕಾರದ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರವು ರಾಜ್ಯಪಾಲರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ,’ ಎಂದು ಆರೋಪಿಸಿದೆ. ಜತೆಗೆ, ಬಿಜೆಪಿಯು ಹಣದ ಬಲದಿಂದ ಅಧಿಕಾರ ಹಿಡಿಯುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ ಹೇಳಿದ್ದಾರೆ.

ಪ್ರಮಾಣ ಸ್ವೀಕರಿಸಿದ ಮನೋಹರ್‌ ಪಾರೀಕರ್‌ ಹಾಗೂ ತಂಡಕ್ಕೆ ನನ್ನ ಅಭಿನಂದನೆಗಳು. ಗೋವಾವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವಂತಾಗಲಿ ಎಂದು ಹಾರೈಸುತ್ತೇನೆ.
ನರೇಂದ್ರ ಮೋದಿ, ಪ್ರಧಾನಿ

ಧನ ಬಲ ಪ್ರಯೋಗಿಸಿ, ಪ್ರಜಾಸತ್ತೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಗೋವಾ, ಮಣಿಪುರದ ಜನರ ತೀರ್ಪನ್ನೇ ಬಿಜೆಪಿ ಕದ್ದಿದೆ. ಗೋವಾ ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸಿದ್ದಾರೆ.
ರಾಹುಲ್‌ ಗಾಂಧಿ, ಕಾಂಗ್ರೆಸ್‌ ಉಪಾಧ್ಯಕ್ಷ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.