ರಾಹುಲ್ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ
Team Udayavani, Mar 19, 2017, 3:50 AM IST
ಹೊಸದಿಲ್ಲಿ: ಚುನಾವಣೆಗಳಲ್ಲಿ ಪದೇ ಪದೆ ಎಡವುತ್ತಿರುವ ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾಣೆಗೆ ಆಗ್ರಹಗಳು ಕೇಳಿಬರುತ್ತಿರುವಂತೆಯೇ, ಇವುಗಳ ಬಗ್ಗೆ ನಿರ್ಣಾಯಕ ನಿರ್ಧಾರಗಳನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಕೈಗೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ, ಉತ್ತರಪ್ರದೇಶದಲ್ಲಿ ಪಕ್ಷದ ಸೋಲಿನ ಕುರಿತಂತೆ ಇಂಡಿಯನ್ ಎಕ್ಸ್ಪ್ರೆಸ್ ಐಡಿಯಾ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೀಗ ಹೊಸ ಕಾಂಗ್ರೆಸ್ ಬೇಕಾಗಿದೆ. ಹೊಸ ದಾರಿ, ಹೊಸ ರೀತಿಯ, ಹೊಸ ಪ್ರಚಾರ ಕಾರ್ಯ, ಹೊಸ ಆಲೋಚನೆಗಳುಳ್ಳ ಪಕ್ಷ ಬೇಕಾಗಿದೆ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಪಾಲಿಗೆ ರಾಹುಲ್ ಅವರಿಗಿಂತ ಸೂಕ್ತ ವ್ಯಕ್ತಿ ಬೇರಾರೂ ಇಲ್ಲ. ರಾಹುಲ್ ತಕ್ಕ ನಿರ್ಣಯ ಕೈಗೊಳ್ಳುತ್ತಿಲ್ಲ ಎಂಬುದೇ ನನ್ನ ದೂರು. ನನ್ನ ಈ ಮಾತುಗಳನ್ನು ಪದೇ ಪದೆ ಕೇಳಿ ಕೆಲವೊಮ್ಮೆ ಅವರು ಕೋಪಗೊಂಡಿದ್ದೂ ಇದೆ ಎಂದು ದಿಗ್ವಿಜಯ್ ಹೇಳಿದ್ದಾರೆ.
2014 ಚುನಾವಣೆ ಬಳಿಕ ಎ.ಕೆ.ಆ್ಯಂಟನಿ ಸಮಿತಿ ಕಾಂಗ್ರೆಸ್ ಸುಧಾರಣೆ ಕುರಿತಾಗಿ ಕೊಟ್ಟ ವರದಿಯೂ ಅನುಷ್ಠಾನಗೊಂಡಿಲ್ಲ ಎಂಬುದನ್ನು ಅವರು ಬೊಟ್ಟುಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ