ರಾಹುಲ್ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ
Team Udayavani, Mar 19, 2017, 3:50 AM IST
ಹೊಸದಿಲ್ಲಿ: ಚುನಾವಣೆಗಳಲ್ಲಿ ಪದೇ ಪದೆ ಎಡವುತ್ತಿರುವ ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾಣೆಗೆ ಆಗ್ರಹಗಳು ಕೇಳಿಬರುತ್ತಿರುವಂತೆಯೇ, ಇವುಗಳ ಬಗ್ಗೆ ನಿರ್ಣಾಯಕ ನಿರ್ಧಾರಗಳನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಕೈಗೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ, ಉತ್ತರಪ್ರದೇಶದಲ್ಲಿ ಪಕ್ಷದ ಸೋಲಿನ ಕುರಿತಂತೆ ಇಂಡಿಯನ್ ಎಕ್ಸ್ಪ್ರೆಸ್ ಐಡಿಯಾ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೀಗ ಹೊಸ ಕಾಂಗ್ರೆಸ್ ಬೇಕಾಗಿದೆ. ಹೊಸ ದಾರಿ, ಹೊಸ ರೀತಿಯ, ಹೊಸ ಪ್ರಚಾರ ಕಾರ್ಯ, ಹೊಸ ಆಲೋಚನೆಗಳುಳ್ಳ ಪಕ್ಷ ಬೇಕಾಗಿದೆ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಪಾಲಿಗೆ ರಾಹುಲ್ ಅವರಿಗಿಂತ ಸೂಕ್ತ ವ್ಯಕ್ತಿ ಬೇರಾರೂ ಇಲ್ಲ. ರಾಹುಲ್ ತಕ್ಕ ನಿರ್ಣಯ ಕೈಗೊಳ್ಳುತ್ತಿಲ್ಲ ಎಂಬುದೇ ನನ್ನ ದೂರು. ನನ್ನ ಈ ಮಾತುಗಳನ್ನು ಪದೇ ಪದೆ ಕೇಳಿ ಕೆಲವೊಮ್ಮೆ ಅವರು ಕೋಪಗೊಂಡಿದ್ದೂ ಇದೆ ಎಂದು ದಿಗ್ವಿಜಯ್ ಹೇಳಿದ್ದಾರೆ.
2014 ಚುನಾವಣೆ ಬಳಿಕ ಎ.ಕೆ.ಆ್ಯಂಟನಿ ಸಮಿತಿ ಕಾಂಗ್ರೆಸ್ ಸುಧಾರಣೆ ಕುರಿತಾಗಿ ಕೊಟ್ಟ ವರದಿಯೂ ಅನುಷ್ಠಾನಗೊಂಡಿಲ್ಲ ಎಂಬುದನ್ನು ಅವರು ಬೊಟ್ಟುಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ