ಮಣಿಪುರದಲ್ಲಿ 130 ದಿನಗಳ ಆರ್ಥಿಕ ದಿಗ್ಬಂಧನ ಮುಕ್ತಾಯ
Team Udayavani, Mar 20, 2017, 10:08 AM IST
ಇಂಫಾಲ: ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 130 ದಿನಗಳಿಂದ ಜಾರಿಯಲ್ಲಿದ್ದ ಆರ್ಥಿಕ ದಿಗ್ಬಂಧನ ಹಿಂಪಡೆಯಲಾಗಿದೆ. ರವಿವಾರ ತಡರಾತ್ರಿಯಿಂದ ಯಾವುದೇ ರೀತಿಯ ಸಮಸ್ಯೆಗಳು ಇರುವುದಿಲ್ಲವೆಂದು ಸೇನಾಪತಿ ಜಿಲ್ಲೆಯಲ್ಲಿ ಕೇಂದ್ರ, ರಾಜ್ಯ ಮತ್ತು ನಾಗಾ ಸಂಘಟನೆಗಳ ನಡುವಿನ ಮಾತುಕತೆಯಲ್ಲಿ ತೀರ್ಮಾನಿಸಲಾಗಿದೆ. ಬಂಧಿತ ಯುನೈಟೆಡ್ ನಾಗಾ ಕೌನ್ಸಿಲ್ನ ಮುಖಂಡರನ್ನು ಸರಕಾರ ಬೇಷರತ್ ಬಿಡುಗಡೆ ಮಾಡಲಿದ್ದು, ಆರ್ಥಿಕ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ನಾಗಾ ಬುಡಕಟ್ಟು ಮುಖಂಡರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಿದೆ.
ಮತ್ತೂಂದು ಗಮನಾರ್ಹ ಬೆಳವಣಿಗೆಯಲ್ಲಿ ಎನ್.ಬೈರೇನ್ ಸಿಂಗ್ ನೇತೃತ್ವದ ಮೈತ್ರಿಕೂಟದ ಸರಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ. ಹೀಗಾಗಿ, ಬಿಜೆಪಿ ಶಾಸಕರು ಗುವಾಹಾಟಿಯ ರೆಸಾರ್ಟಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗ್ಗೆ ವಿಶೇಷ ವಿಮಾನದಲ್ಲಿ ಇಂಫಾಲಕ್ಕೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…