ಹಿಂಸೆಯ ಬಳಿಕ ದಿಲ್ಲಿಯಲ್ಲಿ ಜಾಟ್ ಪ್ರತಿಭಟನೆ ಮುಂದಕ್ಕೆ
Team Udayavani, Mar 20, 2017, 10:13 AM IST
ಹೊಸದಿಲ್ಲಿ: ದಿಲ್ಲಿ ನಿವಾಸಿಗಳಿಗೆ ದೊಡ್ಡ ರಿಲೀಫ್ ಎಂಬಂತೆ ಸೋಮವಾರ ನಡೆಯಬೇಕಿದ್ದ ಜಾಟ್ ಸಮುದಾಯದ ಪ್ರತಿಭಟನೆ ಮುಂದೂಡಲ್ಪಟ್ಟಿದೆ. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗೆ ಆಗ್ರಹಿಸಿ ಜಾಟ್ ಸಮುದಾಯವು ಸಂಸತ್ಭವನದ ಮುಂದೆ ನಡೆಸಲುದ್ದೇಶಿಸಿದ್ದ ಬೃಹತ್ ಪ್ರತಿಭಟನೆಯನ್ನು ಮುಂದೂಡುವುದಾಗಿ ಪ್ರತಿಭಟನಕಾರರು ಹೇಳಿದ್ದಾರೆ. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ರನ್ನು ಭೇಟಿಯಾದ ಬಳಿಕ ಜಾಟ್ ನಾಯಕರು ಈ ನಿರ್ಧಾರ ಕೈಗೊಂಡಿದ್ದಾರೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಮುಖ್ಯಸ್ಥ ಹಾಗೂ ಸದಸ್ಯರನ್ನು ನೇಮಕ ಮಾಡಿದ ಬಳಿಕ ಜಾಟ್ ಮೀಸಲು ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಸಿಎಂ ಖಟ್ಟರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದೂಡಲಾಗಿದೆ. ಸಂಧಾನ ಮಾತುಕತೆಯ ವೇಳೆ ಕೇಂದ್ರ ಸಚಿವ ಬೀರೇಂದರ್ ಸಿಂಗ್ ಹಾಗೂ ಪಿ.ಪಿ. ಚೌಧರಿ ಕೂಡ ಉಪಸ್ಥಿತರಿದ್ದರು.
2 ಬಸ್ಗಳಿಗೆ ಬೆಂಕಿ: ಇದಕ್ಕೂ ಮೊದಲು ಹರ್ಯಾಣದ ಫತೇಹಾಬಾದ್ನಲ್ಲಿ ಜಾಟ್ ಸಮುದಾಯದ ಮಂದಿ ಹಿಂಸಾಚಾರಕ್ಕಿಳಿದಿದ್ದರು. ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಎರಡು ಬಸ್ಗಳಿಗೆ ಬೆಂಕಿ ಹಚ್ಚಿದರು. ಘಟನೆಯಲ್ಲಿ ಡಿಎಸ್ಪಿ ಗುರುದಯಾಳ್ ಸಿಂಗ್ ಸೇರಿದಂತೆ ಭಾರೀ ಸಂಖ್ಯೆಯ ಪೊಲೀಸರು ಗಾಯಗೊಂಡಿದ್ದರು. ದಿಲ್ಲಿಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಭದ್ರತೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್