ವೊಡಾಫೋನ್‌-ಐಡಿಯಾ ವಿಲೀನ; 2  ವರ್ಷಗಳಲ್ಲೇ “ದಿಗ್ಗಜ’ನ ಜನನ


Team Udayavani, Mar 21, 2017, 3:50 AM IST

20-PTI-8.jpg

ಮುಂಬಯಿ: ಉದ್ಯಮಿ ಮುಕೇಶ್‌ ಅಂಬಾನಿ ಅವರ “ಜಿಯೋ’ ಇಡೀ ಮೊಬೈಲ್‌ ಜಗತ್ತನ್ನೇ ತಲ್ಲಣಗೊಳಿಸಿದ ಬೆನ್ನಲ್ಲೇ ದೂರಸಂಪರ್ಕ ವಲಯದಲ್ಲಿ ಅತಿದೊಡ್ಡ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬ್ರಿಟನ್‌ನ ದೂರಸಂಪರ್ಕ ಕಂಪೆನಿ ವೊಡಾಫೋನ್‌ ಮತ್ತು ಆದಿತ್ಯ ಬಿರ್ಲಾ ಗ್ರೂಪ್‌ ಮಾಲೀಕತ್ವದ ಐಡಿಯಾ ಸೆಲ್ಯುಲರ್‌ ಕಂಪೆನಿಯು ವಿಲೀನಗೊಂಡು ಹೊಸ ಟೆಲಿಕಾಂ ದಿಗ್ಗಜನ ಹುಟ್ಟಿಗೆ ಕಾರಣವಾಗಲಿದೆ.

ದೂರಸಂಪರ್ಕ ಕ್ಷೇತ್ರದಲ್ಲಿ ರಿಲಯನ್ಸ್‌ ಜಿಯೋದ ಪಾರುಪತ್ಯಕ್ಕೆ ಕಡಿವಾಣ ಹಾಕುವಂತೆ, ವೊಡಾಫೋನ್‌ ಮತ್ತು ಐಡಿಯಾ ಕಂಪೆನಿಯು ವಿಲೀನಗೊಳ್ಳುವ ಅಧಿಕೃತ ಘೋಷಣೆ ಸೋಮವಾರ ಹೊರಬಿದ್ದಿದೆ. ಅದರಂತೆ, ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ವರ್ಷಗಳಲ್ಲಿ ಹೊಸ ಟೆಲಿಕಾಂ ಕಂಪೆನಿ  ಜನ್ಮತಾಳಲಿದೆ. ಕುಮಾರ ಮಂಗಲಂ ಬಿರ್ಲಾ ಅವರೇ ಈ ನೂತನ ಕಂಪೆನಿಯ ಅಧ್ಯಕ್ಷರಾಗಲಿದ್ದಾರೆ.  

ಬಿರ್ಲಾ ಹಾಗೂ ವೊಡಾಫೋನ್‌ ಸಿಇಒ ವಿಟ್ಟೋರಿಯೋ ಕೊಲಾವೋ ಅವರು ಮುಂಬಯಿನಲ್ಲಿ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ವಿಲೀನಗೊಂಡ ಬಳಿಕ ಶೇ.35ರಷ್ಟು ಮಾರುಕಟ್ಟೆ ಪಾಲು ಹೊಂದುವ ಮೂಲಕ ವೊಡಾಫೋನ್‌-ಐಡಿಯಾ ಗ್ರೂಪ್‌ ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಅಷ್ಟೇ ಅಲ್ಲ, ಈ ನಿರ್ಧಾರವು ಎರಡೂ ಕಂಪೆನಿಗಳಿಗೆ ಹೊಸ ದರ ಸಮರವನ್ನು ಎದುರಿಸುವ ಶಕ್ತಿಯನ್ನೂ ನೀಡಲಿದೆ.

ಷೇರುಗಳ ಕಥೆಯೇನು?: ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುವಾಗ ಹೊಸ ಕಂಪೆನಿಯಲ್ಲಿ ವೊಡಾಫೋನ್‌ ಶೇ.45.1 ಷೇರುಗಳನ್ನು ಹೊಂದಿರಲಿದೆ. ಶೇ.4.9ರಷ್ಟು ಷೇರುಗಳನ್ನು 3,874 ಕೋಟಿ ರೂ.ಗೆ ಆದಿತ್ಯ ಬಿರ್ಲಾ ಗ್ರೂಪ್‌ಗೆ ವರ್ಗಾಯಿಸಲಿದೆ. ಐಡಿಯಾ ಕಂಪೆನಿಯು ಶೇ.26ರಷ್ಟು ಷೇರುಗಳನ್ನು ಪಡೆಯಲಿದೆ. ಉಳಿದ ಷೇರು ಗಳಿಗೆ ಸಾರ್ವಜನಿಕ ಷೇರುದಾರರೇ ಮಾಲೀಕರಾಗಿರುತ್ತಾರೆ. ಆದರೆ, ಇಂಡಸ್‌ ಟವರ್ಸ್‌ನಲ್ಲಿರುವ ವೊಡಾಫೋನ್‌ನ ಶೇ.42 ಷೇರುಗಳು ಮಾತ್ರ ಇದರಿಂದ ಹೊರತಾಗಿರಲಿದೆ. 

2ನೇ ಸ್ಥಾನಕ್ಕಿಳಿಯುವ ಏರ್‌ಟೆಲ್‌: 204.68 ದಶಲಕ್ಷ ಗ್ರಾಹಕರನ್ನು ಹೊಂದಿರುವ ವೊಡಾಫೋನ್‌ ಶೇ.18.16ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದರೆ, ಐಡಿಯಾವು ಶೇ.16.9 ಮಾರುಕಟ್ಟೆ ಪಾಲಿನ ಮೂಲಕ 190.51 ದಶಲಕ್ಷ ಗ್ರಾಹಕರನ್ನು ಹೊಂದಿದೆ. ಇನ್ನೊಂದೆಡೆ, 265.85 ದಶಲಕ್ಷ ಗ್ರಾಹಕರು ಹಾಗೂ ಶೇ.23.58 ಮಾರುಕಟ್ಟೆ ಪಾಲು ಹೊಂದಿರುವ ಏರ್‌ಟೆಲ್‌ ಸದ್ಯಕ್ಕೆ ಆದಾಯ ಮತ್ತು ಗ್ರಾಹಕರ ಬೇಸ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಸಿಎಲ್‌ಎಸ್‌ಎ ವರದಿ ಪ್ರಕಾರ, ಈಗಿನ ವಿಲೀನ ಪ್ರಕ್ರಿಯೆಯಿಂದ ಹುಟ್ಟುವ ಹೊಸ ಸಂಸ್ಥೆಯು 80 ಸಾವಿರ ಕೋಟಿ ರೂ. ಆದಾಯ ಗಳಿಸಲಿದ್ದು, 40 ಕೋಟಿ ಗ್ರಾಹಕರೊಂದಿಗೆ ಶೇ.43 ಆದಾಯದ ಪಾಲು ಮತ್ತು ಶೇ.40ರಷ್ಟು ಸಕ್ರಿಯ ಗ್ರಾಹಕರನ್ನು ಪಡೆಯುವ ಮೂಲಕ ಹೊಸ ದಾಖಲೆ ಮಾಡಲಿದೆ. 

ಪರಿಣಾಮಗಳೇನು?
ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿರುವ ವೊಡಾಫೋನ್‌ ಮತ್ತು ಐಡಿಯಾ ಭಾರತದ ದೂರಸಂಪರ್ಕ ಮಾರುಕಟ್ಟೆಯಲ್ಲಿ ನಂ.1 ಸ್ಥಾನಕ್ಕೇರಲಿವೆ. ಪ್ರಸ್ತುತ ನಂ.1 ಸ್ಥಾನದಲ್ಲಿರುವ ಭಾರ್ತಿ ಏರ್‌ಟೆಲ್‌ ಎರಡನೇ ಸ್ಥಾನಕ್ಕೆ ಇಳಿಯಲಿದೆ.

ಎರಡೂ ಸಂಸ್ಥೆಗಳ ಜಂಟಿ ಗ್ರಾಹಕರ ಸಂಖ್ಯೆ 40 ಕೋಟಿಗೇರಲಿದೆ. ಸದ್ಯಕ್ಕೆ ಏರ್‌ಟೆಲ್‌ಗೆ 27 ಕೋಟಿ, ಜಿಯೋಗೆ 7.2 ಕೋಟಿ ಗ್ರಾಹಕರಿದ್ದಾರೆ.

ವಿಲೀನಗೊಂಡ ಕಂಪೆನಿ ಸಾಕಷ್ಟು ಸಂಪನ್ಮೂಲ ಹೊಂದಿರುವ ಕಾರಣ, ದರ ಸಮರವು ತಾರಕಕ್ಕೇರಲಿವೆ. ಆಗ ಗ್ರಾಹಕರೇ ರಾಜನಾಗುವುದು ಖಚಿತ. ಏಕೆಂದರೆ, ಎಲ್ಲ ಕಂಪೆನಿಗಳೂ ಅಗ್ಗದ ದರದಲ್ಲಿ ಕರೆ, ಸಂದೇಶ ಹಾಗೂ ಡಾಟಾ ಸೇವೆಯನ್ನು ನೀಡಲಿವೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲ ಹೆಚ್ಚು.

ಕಂಪೆನಿಗಳು ಒಂದೆರಡು ವರ್ಷಗಳ ಕಾಲ ದರ ಸಮರದಲ್ಲಿ ಹೋರಾಟಕ್ಕಿಳಿಯಬಹುದು. ಆದರೆ, ದೀರ್ಘ‌ಕಾಲದಲ್ಲಿ ಮತ್ತೆ ದರ ಏರಿಕೆಯಾಗಬಹುದು. ಈ ವಲಯದಲ್ಲಿನ ಕಂಪೆನಿಗಳ ಸಂಖ್ಯೆ ಕಡಿಮೆಯಿರುವ ಕಾರಣ, ದರದ ವಿಚಾರದಲ್ಲಿ ಅವುಗಳೇ ಒಮ್ಮತಕ್ಕೆ ಬರಬಹುದು. 

ಈ ಕ್ರೋಡೀಕರಣವು ಆರ್ಥಿಕ ಬಿಕ್ಕಟ್ಟಿನಲ್ಲಿರುವ ಟೆಲಿಕಾಂ ವಲಯಕ್ಕೆ ಆಕ್ಸಿಜನ್‌ ಆಗಲಿದೆ. ವಿಲೀನ ಪ್ರಕ್ರಿಯೆಗಳಿಂದಾಗಿ ಕೊನೆಗೆ ಮೂರೇ ಕಂಪೆನಿಗಳು ಉಳಿಯುವ ಕಾರಣ, ಸ್ಪರ್ಧೆಗಳು ಕಡಿಮೆಯಾಗಿ, ಆದಾಯ ಹೆಚ್ಚಲಿವೆ.

ವೊಡಾಫೋನ್‌-ಐಡಿಯಾ ವಿಲೀನದಿಂದಾಗಿ ದೇಶಾದ್ಯಂತ ಸಂಪನ್ಮೂಲಗಳ ಸಂಖ್ಯೆ ಹೆಚ್ಚಾಗುವ ಕಾರಣ, ಹಲವರು ಕೆಲಸ ಕಳೆದುಕೊಳ್ಳಬಹುದು

ಈ ವಲಯದಲ್ಲಿ ಪೈಪೋಟಿ ಹೆಚ್ಚುವುದರಿಂದ, ಗ್ರಾಹಕರಿಗೆ ಗುಣಮಟ್ಟದ ಸೇವೆಗಳು ಸಿಗಬಹುದು. 

ಭಾರತದಲ್ಲಿ ಶೀಘ್ರವೇ 5ಜಿ ಸೇವೆ
ಐಡಿಯಾ-ವೊಡಾಫೋನ್‌ ವಿಲೀನದಿಂದ ಹುಟ್ಟುವ ಹೊಸ ಕಂಪೆನಿಯು ಆದಷ್ಟು ಬೇಗ ಭಾರತದಲ್ಲಿ 5ಜಿ ಸೇವೆ ಒದಗಿಸಲಿದೆ ಎಂದು ವೊಡಾಫೋನ್‌ ಪಿಎಲ್‌ಸಿ ಸಿಇಒ ವಿಟ್ಟೋರಿಯೋ ಕೊಲಾವೋ ಹೇಳಿದ್ದಾರೆ. ಜತೆಗೆ, ದೇಶದಲ್ಲಿ 4ಜಿ ಸೇವೆಯ ಲಭ್ಯತೆಯನ್ನು ಹೆಚ್ಚಿಸುವುದಾಗಿ ಹಾಗೂ ಅತ್ಯುತ್ತಮ ದರ್ಜೆಯ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ರೋಮಿಂಗ್‌ ಸೇವೆ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.