ಜಿಎಸ್ಟಿಗೆ ರಾಜ್ಯಸಭೆ ಅಸ್ತು; ಜುಲೈನಿಂದ ಜಾರಿ
Team Udayavani, Apr 7, 2017, 3:45 AM IST
ನವದೆಹಲಿ: ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತಿದ್ದು, ಜುಲೈನಿಂದಲೇ ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಯನ್ನು ಜಾರಿಮಾಡಲು ಇದ್ದ ಎಲ್ಲ ಅಡೆತಡೆಗಳೂ ನಿವಾರಣೆಯಾಗಿವೆ.
ಮೇಲ್ಮನೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್-ಬಿಜೆಪಿ ನಡುವೆ ಒಪ್ಪಂದವೇರ್ಪಟ್ಟ ಹಿನ್ನೆಲೆಯಲ್ಲಿ ಮಸೂದೆಗೆ ಅನುಮೋದನೆ ಸಿಕ್ಕಿದೆ.
ಆರಂಭದಲ್ಲಿ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ವಿಧೇಯಕಕ್ಕೆ ಕೆಲವೊಂದು ತಿದ್ದುಪಡಿಗಳನ್ನು ಪ್ರಸ್ತಾಪಿಸಿದರಾದರೂ, ಕೊನೆಗೆ ಜಿಎಸ್ಟಿ ಸರ್ವಾನುಮತದಿಂದ ಅಂಗೀ ಕಾರವಾಗಬೇಕು ಎಂಬ ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಅವರ ಸೂಚನೆಯ ಮೇರೆಗೆ ತಮ್ಮ ಪ್ರಸ್ತಾಪವನ್ನು ಕೈಬಿಟ್ಟರು. ಹೀಗಾಗಿ, ರಾಜ್ಯಸಭೆಯಲ್ಲಿ ಯಾವುದೇ ಅಡ್ಡಿಗಳಿಲ್ಲದೆ ವಿಧೇಯಕ ಅಂಗೀಕಾರಗೊಂಡಿತು.
ಇನ್ನು ರಾಜ್ಯ ಸರ್ಕಾರಗಳು ಜಿಎಸ್ಟಿಯನ್ನು ಪಾಸ್ ಮಾಡಿದರೆ, ಜುಲೈನಿಂದಲೇ ಏಕರೂಪದ ತೆರಿಗೆ ಜಾರಿಯಾಗಲಿದೆ.8 ಗಂಟೆಗಳ ಕಾಲ ನಡೆದ ಚರ್ಚೆ ವೇಳೆ, ವಿತ್ತ ಸಚಿವ ಜೇಟಿÉ ಅವರು, ಜಿಎಸ್ಟಿ ಕ್ರೆಡಿಟ್ ಅನ್ನು ಹಿಂದಿನ ಯುಪಿಎ ಸರ್ಕಾರಕ್ಕೆ ನೀಡಬಯಸುತ್ತೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ