ಆಧಾರ್‌ ಅನುಮಾನ ಅನಗತ್ಯ


Team Udayavani, May 8, 2017, 9:42 AM IST

Ajay-8-5.jpg

ಹೊಸದಿಲ್ಲಿ: ಆಧಾರ್‌ ಮಾಹಿತಿ ಕದಿಯುವುದು ಅಸಾಧ್ಯ. ಅದು ಅತ್ಯಂತ ಸುರಕ್ಷಿತ ವ್ಯವಸ್ಥೆ. ಇದರ ಬಗ್ಗೆ ಅನುಮಾನ ಅನಗತ್ಯ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಧಿಡಿಎಐ)ಸಿಇಒ ಅಜಯ್‌ ಭೂಷಣ್‌ ಪಾಂಡೆ ಹೇಳಿದ್ದಾರೆ. ದೇಶಾದ್ಯಂತ ಆಧಾರ್‌ ಸುರಕ್ಷತೆ ಕುರಿತು ಅನುಮಾನಗಳು ಭುಗಿಲೆದ್ದಿರುವ ನಡುವೆಯೇ ಪಾಂಡೆ  ಅವರು ಈ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಆಧಾರ್‌ ಸುರಕ್ಷತೆ ಮೇಲೆ ಬೆಳಕು ಚೆಲ್ಲಿರುವ ಅವರು, ‘ಆಧಾರ್‌ ನೋಂದಣಿ ಒಂದು ಕಟ್ಟುನಿಟ್ಟಿನ ವ್ಯವಸ್ಥೆ. ಯುಐಡಿಎಐ ನೇಮಿಸಿಕೊಂಡ ತಜ್ಞರು, ಯುಐಡಿಎಐ ಅಭಿವೃದ್ಧಿಪಡಿಸಿದ ಸಾಫ್ಟ್ವೇರ್‌ ಮೂಲಕ ಸಾರ್ವಜನಿಕರ ಆಧಾರ್‌ ಮಾಹಿತಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಹೀಗೆ ನೋಂದಣಿ ಮಾಡಿಕೊಂಡ ಮಾಹಿತಿಯನ್ನು ಯುಡಿಐ ಸರ್ವರ್‌ ಹೊರತು ಬೇರಾರೂ ಓದಲು ಸಾಧ್ಯವಿಲ್ಲ’ ಎಂದಿದ್ದಾರೆ.

ಸಂಖ್ಯೆ ಇದ್ದ ಮಾತ್ರಕ್ಕೆ ಹ್ಯಾಕ್‌ ಮಾಡಲಾಗದು: ‘ಈಗ ನಾವು ನೀಡುವ ಚೆಕ್‌ನಲ್ಲಿ ನಮ್ಮ ಬ್ಯಾಂಕ್‌ ಖಾತೆ ಸಂಖ್ಯೆ ಇರುತ್ತದೆ. ಅಂದ ಮಾತ್ರಕ್ಕೆ ನಮ್ಮಿಂದ ಚೆಕ್‌ ಪಡೆದ ವ್ಯಕ್ತಿ ನಮ್ಮ ಖಾತೆ ಹ್ಯಾಕ್‌ ಮಾಡಲು ಸಾಧ್ಯವೇ? ಇಲ್ಲ. ಹಾಗೆಯೇ ಆಧಾರ್‌ ಸಂಖ್ಯೆ, ಬ್ಯಾಂಕ್‌ ಖಾತೆ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಗಳು ಬಹಿರಂಗಗೊಂಡರೂ ಅವುಗಳಿಗೆ ಪಿನ್‌, ಒಟಿಪಿ ಸುರಕ್ಷತೆ ಇರುವುದರಿಂದ, ಈ ಸಂಖ್ಯೆಗಳನ್ನು ಬಳಸಿ ಹ್ಯಾಕ್‌ ಮಾಡಲಾಗದು’ ಎಂಬುದು ಪಾಂಡೆ ಅವರ ಅಭಿಪ್ರಾಯ.

ನಕಲಿ ಐಡಿ ಅಸಾಧ್ಯ: ‘ಒಮ್ಮೆ ರಾಜು ಎಂಬ ಹೆಸರಿನಲ್ಲಿ ಆಧಾರ್‌ ನೋಂದಣಿ ಮಾಡಿಕೊಂಡ ವ್ಯಕ್ತಿ, ಇನ್ನೊಮ್ಮೆ ಬೇರೆ ಗುರುತಿನ ಚೀಟಿ ನೀಡಿ, ಬೇರೊಂದು ಹೆಸರಿನಲ್ಲಿ ನೋಂದಣಿ ಮಾಡಿಧಿಕೊಳ್ಳಲು ಮುಂದಾದರೆ ಬಯೋಮೆಟ್ರಿಕ್‌ ವಿವರಗಳನ್ನು ನೀಡುವಾಗ ಸಿಕ್ಕಿಬೀಳುತ್ತಾನೆ. ಈ ಮೊದಲೇ ಆತನ ಬಯೋಮೆಟ್ರಿಕ್‌ ಮಾಹಿತಿ ಬೇರೊಂದು ಸಂಖ್ಯೆಯಲ್ಲಿ ನಮೂದಾಗಿರುವ ಕಾರಣ ನೋಂದಣಿ ರದ್ದಾಗುತ್ತದೆ. ಇಂಥವರಿಗೆ ಶಿಕ್ಷೆ ಖಂಡಿತ’ ಎನ್ನುತ್ತಾರೆ ಯುಐಡಿಎಐ ಸಿಇಒ.

ಅದೊಂದೇ ಅಂತಿಮ ಆಗಕೂಡದು 
ನಕಲಿ ಆಧಾರ್‌ ಸಂಖ್ಯೆ, ಕಾರ್ಡ್‌ ಬಳಸಿ ಬ್ಯಾಂಕ್‌ನವರಿಗೆ ಮೋಸ ಮಾಡುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಆದರೆ ಬ್ಯಾಂಕ್‌ ಖಾತೆ ತೆರೆಯುವಾಗ ಆಧಾರ್‌ ಸಂಖ್ಯೆಯೊಂದೇ ಅಂತಿಮ ದಾಖಲೆ ಆಗಬಾರದು. ಬ್ಯಾಂಕ್‌ನವರು ಆಧಾರ್‌ ಹೊರತಾಗಿ, ವ್ಯಕ್ತಿಯ ಮತದಾನ ಗುರುತಿನ ಚೀಟಿ, ಪಡಿತರ ಚೀಟಿ ಸೇರಿ ಬೇರಾವುದೇ ದಾಖಲೆ ಪಡೆದು ಪರಿಶೀಲಿಸಬಹುದು. ಹೀಗೆ ಮಾಡುವುದರಿಂದ ಹಣದ ಅಕ್ರಮ ವ್ಯವಹಾರಗಳನ್ನು ತಡೆಯಬಹುದು.ಸರಕಾರದ ಸಹಾಯಧನ ಮತ್ತಿತರ ಪ್ರಯೋಜನ ಪಡೆಯಲು ಆಧಾರ್‌ ಅಗತ್ಯ. ಆದರೆ ಕಡ್ಡಾಯವಲ್ಲ. ಆಧಾರ್‌ ಹೊಂದಿರದ ವ್ಯಕ್ತಿ, ಬೇರಾವುದೇ ಗುರುತಿನ ದಾಖಲೆ ನೀಡಲು ಆಧಾರ್‌ ಕಾಯ್ದೆಯ ವಿಭಾಗ 7 ಅವಕಾಶ ಕಲ್ಪಿಸುತ್ತದೆ. ಆದರೆ, ಇದೇ ವೇಳೆ ಆತ ಆಧಾರ್‌ ಸಂಖ್ಯೆಗೆ ನೋಂದಣಿಯಾಗಬೇಕಾಗುತ್ತದೆ’ ಎಂದೂ ಅಜಯ್‌ ಭೂಷಣ್‌ ಪಾಂಡೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.