ಆಧಾರ್ ಅನುಮಾನ ಅನಗತ್ಯ
Team Udayavani, May 8, 2017, 9:42 AM IST
ಹೊಸದಿಲ್ಲಿ: ಆಧಾರ್ ಮಾಹಿತಿ ಕದಿಯುವುದು ಅಸಾಧ್ಯ. ಅದು ಅತ್ಯಂತ ಸುರಕ್ಷಿತ ವ್ಯವಸ್ಥೆ. ಇದರ ಬಗ್ಗೆ ಅನುಮಾನ ಅನಗತ್ಯ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಧಿಡಿಎಐ)ಸಿಇಒ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ. ದೇಶಾದ್ಯಂತ ಆಧಾರ್ ಸುರಕ್ಷತೆ ಕುರಿತು ಅನುಮಾನಗಳು ಭುಗಿಲೆದ್ದಿರುವ ನಡುವೆಯೇ ಪಾಂಡೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಆಧಾರ್ ಸುರಕ್ಷತೆ ಮೇಲೆ ಬೆಳಕು ಚೆಲ್ಲಿರುವ ಅವರು, ‘ಆಧಾರ್ ನೋಂದಣಿ ಒಂದು ಕಟ್ಟುನಿಟ್ಟಿನ ವ್ಯವಸ್ಥೆ. ಯುಐಡಿಎಐ ನೇಮಿಸಿಕೊಂಡ ತಜ್ಞರು, ಯುಐಡಿಎಐ ಅಭಿವೃದ್ಧಿಪಡಿಸಿದ ಸಾಫ್ಟ್ವೇರ್ ಮೂಲಕ ಸಾರ್ವಜನಿಕರ ಆಧಾರ್ ಮಾಹಿತಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಹೀಗೆ ನೋಂದಣಿ ಮಾಡಿಕೊಂಡ ಮಾಹಿತಿಯನ್ನು ಯುಡಿಐ ಸರ್ವರ್ ಹೊರತು ಬೇರಾರೂ ಓದಲು ಸಾಧ್ಯವಿಲ್ಲ’ ಎಂದಿದ್ದಾರೆ.
ಸಂಖ್ಯೆ ಇದ್ದ ಮಾತ್ರಕ್ಕೆ ಹ್ಯಾಕ್ ಮಾಡಲಾಗದು: ‘ಈಗ ನಾವು ನೀಡುವ ಚೆಕ್ನಲ್ಲಿ ನಮ್ಮ ಬ್ಯಾಂಕ್ ಖಾತೆ ಸಂಖ್ಯೆ ಇರುತ್ತದೆ. ಅಂದ ಮಾತ್ರಕ್ಕೆ ನಮ್ಮಿಂದ ಚೆಕ್ ಪಡೆದ ವ್ಯಕ್ತಿ ನಮ್ಮ ಖಾತೆ ಹ್ಯಾಕ್ ಮಾಡಲು ಸಾಧ್ಯವೇ? ಇಲ್ಲ. ಹಾಗೆಯೇ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗಳು ಬಹಿರಂಗಗೊಂಡರೂ ಅವುಗಳಿಗೆ ಪಿನ್, ಒಟಿಪಿ ಸುರಕ್ಷತೆ ಇರುವುದರಿಂದ, ಈ ಸಂಖ್ಯೆಗಳನ್ನು ಬಳಸಿ ಹ್ಯಾಕ್ ಮಾಡಲಾಗದು’ ಎಂಬುದು ಪಾಂಡೆ ಅವರ ಅಭಿಪ್ರಾಯ.
ನಕಲಿ ಐಡಿ ಅಸಾಧ್ಯ: ‘ಒಮ್ಮೆ ರಾಜು ಎಂಬ ಹೆಸರಿನಲ್ಲಿ ಆಧಾರ್ ನೋಂದಣಿ ಮಾಡಿಕೊಂಡ ವ್ಯಕ್ತಿ, ಇನ್ನೊಮ್ಮೆ ಬೇರೆ ಗುರುತಿನ ಚೀಟಿ ನೀಡಿ, ಬೇರೊಂದು ಹೆಸರಿನಲ್ಲಿ ನೋಂದಣಿ ಮಾಡಿಧಿಕೊಳ್ಳಲು ಮುಂದಾದರೆ ಬಯೋಮೆಟ್ರಿಕ್ ವಿವರಗಳನ್ನು ನೀಡುವಾಗ ಸಿಕ್ಕಿಬೀಳುತ್ತಾನೆ. ಈ ಮೊದಲೇ ಆತನ ಬಯೋಮೆಟ್ರಿಕ್ ಮಾಹಿತಿ ಬೇರೊಂದು ಸಂಖ್ಯೆಯಲ್ಲಿ ನಮೂದಾಗಿರುವ ಕಾರಣ ನೋಂದಣಿ ರದ್ದಾಗುತ್ತದೆ. ಇಂಥವರಿಗೆ ಶಿಕ್ಷೆ ಖಂಡಿತ’ ಎನ್ನುತ್ತಾರೆ ಯುಐಡಿಎಐ ಸಿಇಒ.
ಅದೊಂದೇ ಅಂತಿಮ ಆಗಕೂಡದು
ನಕಲಿ ಆಧಾರ್ ಸಂಖ್ಯೆ, ಕಾರ್ಡ್ ಬಳಸಿ ಬ್ಯಾಂಕ್ನವರಿಗೆ ಮೋಸ ಮಾಡುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಆದರೆ ಬ್ಯಾಂಕ್ ಖಾತೆ ತೆರೆಯುವಾಗ ಆಧಾರ್ ಸಂಖ್ಯೆಯೊಂದೇ ಅಂತಿಮ ದಾಖಲೆ ಆಗಬಾರದು. ಬ್ಯಾಂಕ್ನವರು ಆಧಾರ್ ಹೊರತಾಗಿ, ವ್ಯಕ್ತಿಯ ಮತದಾನ ಗುರುತಿನ ಚೀಟಿ, ಪಡಿತರ ಚೀಟಿ ಸೇರಿ ಬೇರಾವುದೇ ದಾಖಲೆ ಪಡೆದು ಪರಿಶೀಲಿಸಬಹುದು. ಹೀಗೆ ಮಾಡುವುದರಿಂದ ಹಣದ ಅಕ್ರಮ ವ್ಯವಹಾರಗಳನ್ನು ತಡೆಯಬಹುದು.ಸರಕಾರದ ಸಹಾಯಧನ ಮತ್ತಿತರ ಪ್ರಯೋಜನ ಪಡೆಯಲು ಆಧಾರ್ ಅಗತ್ಯ. ಆದರೆ ಕಡ್ಡಾಯವಲ್ಲ. ಆಧಾರ್ ಹೊಂದಿರದ ವ್ಯಕ್ತಿ, ಬೇರಾವುದೇ ಗುರುತಿನ ದಾಖಲೆ ನೀಡಲು ಆಧಾರ್ ಕಾಯ್ದೆಯ ವಿಭಾಗ 7 ಅವಕಾಶ ಕಲ್ಪಿಸುತ್ತದೆ. ಆದರೆ, ಇದೇ ವೇಳೆ ಆತ ಆಧಾರ್ ಸಂಖ್ಯೆಗೆ ನೋಂದಣಿಯಾಗಬೇಕಾಗುತ್ತದೆ’ ಎಂದೂ ಅಜಯ್ ಭೂಷಣ್ ಪಾಂಡೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ