ಗೋವು ತಾಯ್ತನದ ಸಂಕೇತ; ಪವಿತ್ರ ರಾಷ್ಟ್ರೀಯ ಸಂಪತ್ತು
Team Udayavani, Jun 11, 2017, 10:44 AM IST
ಅಮರಾವತಿ: “ಗೋವು ಎನ್ನುವುದು ತಾಯ್ತನದ ಸಂಕೇತ. ಅದು ಪವಿತ್ರ ರಾಷ್ಟ್ರೀಯ ಸಂಪತ್ತು. ಅದನ್ನು ಕೊಲ್ಲುವುದು ಅಥವಾ ನೋವುಂಟು ಮಾಡುವುದನ್ನು ಜಾಮೀನುರಹಿತ ಅಪರಾಧ ಎಂದು ಘೋಷಿಸಬೇಕು.’
ಹೀಗೆಂದು ಹೇಳಿರುವುದು ಹೈದರಾಬಾದ್ ಹೈಕೋರ್ಟ್ ನ್ಯಾಯಾಧೀಶ ಬಿ. ಶಿವಶಂಕರ ರಾವ್. ಗೋಹತ್ಯೆ ಮಾಡು ವವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ರಾಜಸ್ಥಾನ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೂಬ್ಬರು ನ್ಯಾಯಾಧೀಶರಿಂದ ಇಂಥ ಮಾತುಗಳು ಹೊರಬಿದ್ದಿವೆ. ತನ್ನ ಮನೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದ 63 ಹಸು ಗಳು, 2 ಕೋಣಗಳನ್ನು ವಾಪಸ್ ಕೊಡಿಸಬೇಕೆಂದು ಕೋರಿ ಜಾನುವಾರು ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಮನವಿ ತಿರಸ್ಕರಿಸುವ ವೇಳೆ ನ್ಯಾ| ರಾವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಮೊಘಲ್ ದೊರೆಗಳೂ ಗೋಹತ್ಯೆಯನ್ನು ನಿರ್ಬಂಧಿಸಿದ್ದರು. ಜಾನುವಾರು ಕ್ರೌರ್ಯ ಪ್ರತಿಬಂಧಕ ಕಾಯ್ದೆಗೆ ತಿದ್ದುಪಡಿ ತರಬೇಕು. ಆರೋಗ್ಯವಂತ ಜಾನುವಾರುಗಳನ್ನು ವಯಸ್ಸಾಗಿದೆ, ವಧೆಗೆ ಅರ್ಹವಾಗಿವೆ ಎಂದು ಸುಳ್ಳು ಪ್ರಮಾಣಪತ್ರ ನೀಡುವ ಪಶುವೈದ್ಯರಿಗೂ ಶಿಕ್ಷೆಯಾಗಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ