ಮಹಾ ರೈತರ ಸಾಲ ಮನ್ನಾ; ಮ.ಪ್ರ.ದಲ್ಲಿ ಶುಲ್ಕ ಮನ್ನಾ
Team Udayavani, Jun 12, 2017, 1:07 AM IST
ಮುಂಬಯಿ/ ಭೋಪಾಲ್: ಸತತ 11 ದಿನಗಳ ರೈತರ ಹೋರಾಟಕ್ಕೆ ಮಹಾರಾಷ್ಟ್ರ ಸರಕಾರ ಕೊನೆಗೂ ಮಣಿದಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ರವಿವಾರ ಸಿಎಂ ದೇವೇಂದ್ರ ಫಡ್ನವೀಸ್ ಸರಕಾರ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಬೃಹತ್ ಪ್ರತಿಭಟನೆಯನ್ನು ರೈತರು ವಾಪಸ್ ಪಡೆದಿದ್ದಾರೆ.
ಇನ್ನೊಂದೆಡೆ ಭಾರೀ ಹಿಂಸಾಚಾರವನ್ನು ಕಂಡ ಮಧ್ಯಪ್ರದೇಶದಲ್ಲಿ ರೈತರ ಮಕ್ಕಳಿಗೆ ಸ್ವ ಉದ್ಯೋಗ ನಡೆಸಲು ಸಾಲ ನೀಡುವುದಾಗಿ ಹಾಗೂ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ರೈತರ ಮಕ್ಕಳ ಶುಲ್ಕವನ್ನು ಭರಿಸುವುದಾಗಿ ಸರಕಾರ ಘೋಷಿಸಿದೆ. ಆದರೆ ಇಲ್ಲಿ ರೈತರ ಪ್ರಮುಖ ಬೇಡಿಕೆಯಾದ ಸಾಲ ಮನ್ನಾ ಮತ್ತು ಬೆಂಬಲ ಬೆಲೆಯನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿಲ್ಲ.
ನಿರಶನ ಅಂತ್ಯ
ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಶಾಂತಿಗಾಗಿ ಶನಿವಾರ ನಿರಶನ ಆರಂಭಿಸಿದ್ದ ಚೌಹಾಣ್ ಅವರು ರವಿವಾರ ಉಪವಾಸ ಅಂತ್ಯಗೊಳಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿ ಮರುಕಳಿಸಿದೆ. ಸಾವಿಗೀಡಾದ ರೈತರ ಕುಟುಂಬಗಳೇ ಉಪವಾಸ ಮಾಡದಂತೆ ನನಗೆ ಮನವಿ ಮಾಡಿಕೊಂಡವು. ಹೀಗಾಗಿ ಉಪವಾಸ ಅಂತ್ಯಗೊಳಿಸುತ್ತಿದ್ದೇನೆ’ ಎಂದಿದ್ದಾರೆ. ಇದಕ್ಕೂ ಮುನ್ನ ಅವರು ರೈತರ 236 ಸಮಿತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ