ಎನ್ನಾರೈಗಳಿಗೂ ಮತದಾನ ಅವಕಾಶ: ಪ್ರತಿಕ್ರಿಯೆ ನೀಡಿ
Team Udayavani, Jul 15, 2017, 3:05 AM IST
ಹೊಸದಿಲ್ಲಿ: ಅನಿವಾಸಿ ಭಾರತೀಯರಿಗೆ ಅವರು ಇರುವಲ್ಲಿಂದಲೇ ಮತದಾನ ಅವಕಾಶ ನೀಡುವ ಕುರಿತಂತೆ, ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಇದೇ ವೇಳೆ, ಅನಿವಾಸಿ ಭಾರತೀಯರಿಗೂ ಅಲ್ಲಿಯೇ ಮತದಾನ ಹಕ್ಕು ನೀಡುವ ಬಗ್ಗೆ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗದ ಪ್ರಸ್ತಾವನೆಯನ್ನೂ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಪರಿಗಣಿಸಿದೆ.
ಪ್ರಜಾಪ್ರಾತಿನಿಧ್ಯ ಕಾಯ್ದೆ 1950ನ್ನು ಬದಲಾವಣೆ ಮಾಡಿ ಅನಿವಾಸಿ ಭಾರತೀಯರಿಗೆ ಅಂಚೆ ಮತಪತ್ರ ಮೂಲಕ ಮತದಾನ ಅವಕಾಶ ನೀಡಬಹುದಾಗಿದೆ ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿತ್ತು. ಅನಿವಾಸಿ ಭಾರತೀಯರಿಗೆ ಮತದಾನ ಅವಕಾಶ ಕಲ್ಪಿಸುವ ಬಗ್ಗೆ ಹಲವು ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರತಿಕ್ರಿಯೆ ಕೇಳಿದೆ. ಅಂಚೆ ಮತ ಪತ್ರದ ಮೂಲಕ ಎನ್ನಾರೈಗಳಿಗೂ ಹಕ್ಕು ಚಲಾಯಿಸುವ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ