ಕಾಂಗ್ರೆಸ್ನದ್ದು ಮೊಸಳೆ ಕಣ್ಣೀರು: ಅನಂತ್
Team Udayavani, Jul 22, 2017, 7:00 AM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಶುಕ್ರವಾರ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಗ್ಯುದ್ಧ ನಡೆಯಿತು. ರೈತರ ಆತ್ಮಹತ್ಯೆ ತಡೆಗೆ ಸರಕಾರ ಏನೇನೂ ಮಾಡಿಲ್ಲ ಎಂದು ವಿಪಕ್ಷ ಕಾಂಗ್ರೆಸ್ ಆರೋಪಿ ಸಿದರೆ, ವಿಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತು.
ಕಲಾಪದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ, ಆಂಧ್ರ, ಹರಿಯಾಣ, ಮಧ್ಯಪ್ರದೇಶ ದಲ್ಲಿ ರೈತರೆಲ್ಲ ಬೀದಿಗಿಳಿದಿದ್ದಾರೆ. ಆದರೂ, ಸರಕಾರ ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜತೆಗೆ, ರೈತರು 3 ವರ್ಷಗಳಲ್ಲಿ ಹೆಚ್ಚು ಕಷ್ಟ ಅನುಭವಿಸುತ್ತಿದ್ದಾರೆ ಎಂದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನಂತ್ಕುಮಾರ್, “ಬುಧವಾರ ನಾವೆಲ್ಲರೂ ರೈತರ ಸಮಸ್ಯೆಗಳ ಕುರಿತು ಚರ್ಚಿಸುವಾಗ ವಿಪಕ್ಷ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದೇಕೆ, ಬುಧವಾರದ ಚರ್ಚೆ ವೇಳೆ ಸೋನಿಯಾ ಗಾಂಧಿ, ರಾಹುಲ್ಗಾಂಧಿ ಎಲ್ಲಿದ್ದರು, ನೀವೆಲ್ಲಿದ್ದಿರಿ? ಈಗ ನೀವು ಮೊಸಳೆ ಕಣ್ಣೀರು ಸುರಿಸುತ್ತಿದ್ದೀರಿ. ರೈತರ ಬಗ್ಗೆ ನಾಟಕೀಯವಾಗಿ ಕರುಣೆ ತೋರಿಸುತ್ತಿದ್ದೀರಿ. ಮೋದಿ ಸರಕಾರವು ಕಳೆದ 3 ವರ್ಷಗಳಲ್ಲಿ ರೈತರಿಗಾಗಿ ಮಾಡಿದ ಕೆಲಸವನ್ನು ಈವರೆಗೆ ಯಾವ ಸರಕಾರವೂ ಮಾಡಿಲ್ಲ’ ಎಂದರು.
19 ಸಾವಿರ ಕೋ. ರೂ. ಕಪ್ಪುಹಣ
ಇದೇ ವೇಳೆ, ಸ್ವಿಸ್ನಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್ನ ಖಾತೆದಾರರ ಕುರಿತ ತನಿಖೆ ವೇಳೆ ಐಟಿ ಇಲಾಖೆಯು 19 ಸಾವಿರ ಕೋಟಿ ರೂ.ಮೊತ್ತದ ಕಪ್ಪುಹಣವನ್ನು ಪತ್ತೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟಿÉ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ದೀರ್ಘಕಾಲದಿಂದ ಯಾವುದೇ ಚಟುವಟಿಕೆ ನಡೆಸದೇ ಇದ್ದ 1.62 ಲಕ್ಷ ಶೆಲ್ ಕಂಪನಿಗಳ ನೋಂದಣಿ ರದ್ದು ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ