ಪತಿ ಮರ್ಮಾಂಗ ಕತ್ತರಿಸಿದಳು!
Team Udayavani, Jul 22, 2017, 7:05 AM IST
ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ತನ್ನ ಶೀಲ ಶಂಕಿಸಿದ ಪತಿಯ ಮರ್ಮಾಂಗ ಕತ್ತರಿಸಿ, ಅದನ್ನು ತವರು ಮನೆಗೆ ಕೊಂಡೊಯ್ಯುತ್ತಿದ್ದ ಮಹಿಳೆಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. “ಪತಿಯ ಮರ್ಮಾಂಗವನ್ನು ಕತ್ತರಿಸಿ, ಅದನ್ನು ಪರ್ಸ್ನಲ್ಲಿರಿಸಿಕೊಂಡು ಹೊರಟಿದ್ದ ಮಹಿಳೆಯನ್ನು ಥೂತಿಪಟ್ಟು ಬಳಿ ಬಂಧಿಸಿ, ಕತ್ತರಿಸಿದ ಮರ್ಮಾಂಗವನ್ನು ವಶಕ್ಕೆ ಪಡೆದಿದ್ದೇವೆ,’ ಎಂದು ಗುಡಿಯಟ್ಟಮ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮಹಿಳೆ ಸರಸು ಮತ್ತು ಜಗದೀಶನ್ ಒಂದೇ ಗಾರ್ಮೆಂಟ್ಸ್ನಲ್ಲಿ ದುಡಿಯುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಶುರುವಾಗಿ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗ, ಮೂವರು ಹೆಣ್ಣುಮಕ್ಕಳಿದ್ದಾರೆ. ಆದರೆ ಕೌಟುಂಬಿಕ ಕಲಹದಿಂದಾಗಿ ವರ್ಷದ ಹಿಂದೆ ಪತಿಯಿಂದ ದೂರಾದ ಸರಸು, ತವರು ಮನೆ ಸೇರಿದ್ದರು. ಕಡೆಗೆ ಪುತ್ರನ ಕೋರಿಕೆ ಮೇರೆಗೆ ಮತ್ತೆ ಬಂದು ಪತಿ ಜತೆ ವಾಸವಿದ್ದರು. ಗುರುವಾರ ರಾತ್ರಿ ಕೋಪದಲ್ಲೇ ಮನೆಗೆ ಬಂದ ಜಗದೀಶನ್, ತವರು ಮನೆಯಲ್ಲಿದ್ದಾಗ ಸರಸು ಬೇರೊಬ್ಬ ವ್ಯಕ್ತಿ ಜತೆ ಸಂಬಂಧ ಹೊಂದಿದ್ದ ಬಗ್ಗೆ ಶಂಕಿಸಿದ್ದಾನೆ. ಅಲ್ಲದೆ, “ನಿನಗೆ ವಯಸ್ಸಾಗಿರುವ ಕಾರಣ ನಾನು ಮತ್ತೂಂದು ಮದುವೆಯಾಗುತ್ತೇನೆ,’ ಎಂದಿದ್ದಾನೆ.
ಈ ಮೂಲಕ ಇಬ್ಬರ ನಡುವೆ ಶುರುವಾದ ಜಗಳ, ನಸುಕಿನ 2 ಗಂಟೆವರೆಗೂ ಮುಂದು ವರಿದಿದೆ. ನಂತರ ಜಗದೀಶನ್ ಮಲಗಿದ್ದಾನೆ. ಈ ವೇಳೆ ಅಡುಗೆ ಮನೆಯಿಂದ ಚಾಕು ತೆಗೆ ದು ಕೊಂಡು ಬಂದ ಸರಸು, ಪತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಆಕ್ರಂದನ ಕೇಳಿಸಿಕೊಂಡ ನೆರೆಮನೆಯವ ರಿಂದ ಮಾಹಿತಿ ಪಡೆದ ಪೊಲೀಸರು, ತವರಿಗೆ ಹೊರಟಿದ್ದ ಸರಸುಳನ್ನು ಮಾರ್ಗಮಧ್ಯೆ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ