ಮಾಯಾವತಿ ಗೆಲ್ಲಬಾರದು!; ಯುಪಿ ಡಿಸಿಎಂ ಹುದ್ದೆಗೆ ಮೌರ್ಯ ರಾಜೀನಾಮೆ?
Team Udayavani, Jul 26, 2017, 10:11 AM IST
ಲಕ್ನೋ: ಉತ್ತರಪ್ರದೇಶದ ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೇಶವ್ ಪ್ರಸಾದ್ ಮೌರ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿದೆ. ಇದಕ್ಕೆ ಕಾರಣವಾಗಿರುವುದು ಬಿಎಸ್ಪಿ ಅಧಿನಾಯಕಿ ಮಾಯಾವತಿ ಅವರು ಪುಲ್ಪುರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮೌರ್ಯ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಸಮೀಪದ ಅಭ್ಯರ್ಥಿ ಬಿಎಸ್ಪಿಯ ಕಪಿಲ್ ಮುನಿ ಕಾರ್ವಾರಿಯಾ ವಿರುದ್ಧ 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಲೋಕಸಭಾ ಸದಸ್ಯರಾಗಿದ್ದರೂ ಮೌರ್ಯ ಅವರು ಉಪಮುಖ್ಯಮಂತ್ರಿಯಾಗಿದ್ದರು. ಡಿಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕಾದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ.
ಪುಲ್ಪುರ್ ನಲ್ಲಿ ಬಿಎಸ್ಪಿ ಬಲವಾದ ಕಾರ್ಯಕರ್ತರ ಪಡೆ ಹೊಂದಿದ್ದು ಮಾಯಾವತಿ ಅವರು ಕಣಕ್ಕಿಳಿದರೆ ಗೆಲುವು ಸಾಧಿಸುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಒಂದು ಸ್ಥಾನ ಕಳೆದುಕೊಳ್ಳಲು, ಮಾಯಾವತಿಗೆ ಗೆಲುವು ಸಿಗಬಾರದು ಎನ್ನುವ ಉದ್ದೇಶದಲ್ಲಿ ಮೌರ್ಯ ಅವರನ್ನು ಡಿಸಿಎಂ ಹುದ್ದೆಯಿಂದ ಕೆಳಗಿಳಿಯಲು ಹೇಳಿದೆ ಎಂದು ವರದಿಯಾಗಿದೆ. ಮೌರ್ಯ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಉನ್ನತ ಖಾತೆ ಸಿಗುವ ಸಾಧ್ಯತೆಗಳಿವೆ.
ದಲಿತರ ಪರ ಧ್ವನಿಯಾಗಲು ಸಂಸತ್ತಿನಲ್ಲಿ ಅವಕಾಶ ಇಲ್ಲ ಎಂದು ಮಾಯಾವತಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಇದೀಗ ಲೋಕಸಭಾ ಕ್ಷೇತ್ರ ತೆರವಾದರೆ ಕಣಕ್ಕಿಳಿಯಲು ಮುಂದಾಗಿದ್ದರು ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್