ಬಿಹಾರ, ಗುಜರಾತ್‌ ಆಯ್ತು ಈಗ ಉ.ಪ್ರ.ದಲ್ಲೂ ರಾಜೀನಾಮೆ ಶಾಕ್‌


Team Udayavani, Jul 30, 2017, 5:20 AM IST

BJP-29-7.jpg

– ಇಬ್ಬರು ಎಸ್ಪಿ, ಓರ್ವ ಬಿಎಸ್‌ಪಿ ಶಾಸಕರಿಂದ ರಾಜೀನಾಮೆ

– ಮೋದಿ, ಯೋಗಿ ಗುಣಗಾನ ಮಾಡಿ ಬಿಜೆಪಿಯತ್ತ ಹೆಜ್ಜೆ

ಲಕ್ನೋ: ಕಾಂಗ್ರೆಸ್‌ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ, ಈಗ ವಿಪಕ್ಷ ಮುಕ್ತ ಭಾರತದತ್ತ ಮುನ್ನುಗ್ಗುತ್ತಿದೆ. ಒಂದೊಂದೇ ರಾಜ್ಯದಲ್ಲಿ ತನ್ನ ಹಿಡಿತ ಸ್ಥಾಪಿಸಿಕೊಳ್ಳುತ್ತಿರುವ ಅದು, ಬಿಹಾರದಲ್ಲಿ ನಿತೀಶ್‌ ಜತೆ ಮರು ಸ್ನೇಹ ಮಾಡಿಕೊಂಡಿತು. ಈಗ ಗುಜರಾತ್‌ ಮತ್ತು ಉತ್ತರಪ್ರದೇಶಗಳಲ್ಲಿ ಆಪರೇಶನ್‌ ಕಮಲ ನಡೆಸಿದ್ದು, ವಿಪಕ್ಷಗಳಿಗೆ ಶಾಕ್‌ ಮೇಲೆ ಶಾಕ್‌ ಕೊಡುತ್ತಿದೆ. ಇದರ ಜತೆಗೆ ದಿಲ್ಲಿ ಮತ್ತು ತಮಿಳುನಾಡಿನ ಮೇಲೆ ಪ್ರಧಾನಿ ಮೋದಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕಣ್ಣಿಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಇಬ್ಬರ ರಾಜೀನಾಮೆ: 2019ರ ಲೋಕಸಭೆ ಚುನಾವಣೆ ಹೊತ್ತಿಗೆ ಪಕ್ಷವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ವಿಪಕ್ಷಗಳ (ಯುಪಿಎ) ಶಾಸಕರನ್ನು ಸೆಳೆಯುತ್ತಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಪ್ರಹಸನದ ಬೆನ್ನಲ್ಲೇ, ಶನಿವಾರ ಸಮಾಜವಾದಿ ಪಕ್ಷ (ಎಸ್‌ಪಿ)ದ ಇಬ್ಬರು, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಓರ್ವ ಶಾಸಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸೇರ್ಪಡೆ ಆಗುತ್ತಿರುವ ಬಗ್ಗೆಯೂ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬುಕ್ಕಲ್‌ ನವಾಬ್‌, ಯಶವಂತ್‌ ಸಿಂಗ್‌ ಹಾಗೂ ಠಾಕೂರ್‌ ಜೈವೀರ್‌ ಸಿಂಗ್‌ ರಾಜೀನಾಮೆ ಸಲ್ಲಿಸಿ ಬಿಜೆಪಿಯತ್ತ ಮುಖಮಾಡಿರುವ ಶಾಸಕರು. ರಾಜೀನಾಮೆ ಬಳಿಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರ ಗುಣಗಾನ ಮಾಡಿದ್ದಾರೆ.

ದಿಲ್ಲಿ, ತಮಿಳುನಾಡು ಮುಂದಿನ ಟಾರ್ಗೆಟ್‌
ಬಿಹಾರ ಆಯ್ತು, ಗುಜರಾತ್‌, ಉತ್ತರ ಪ್ರದೇಶದಲ್ಲೂ ಆಪರೇಷನ್‌ ನಡೆಯುತ್ತಿದೆ. ಇನ್ನು ಮೋದಿ-ಶಾ ಅವರ ಮುಂದಿನ ಗುರಿ ದಿಲ್ಲಿ ಮತ್ತು ತಮಿಳುನಾಡು! ಇಂಥದ್ದೊಂದು ಸುಳಿವು ಬಿಜೆಪಿ ಪಾಳಯದಿಂದಲೇ ಹೊರ ಬಿದ್ದಿದೆ. ದಿಲ್ಲಿಯಲ್ಲಿ ಆಡಳಿತದಲ್ಲಿರುವ ಆಮ್‌ ಆದ್ಮಿ ಪಕ್ಷದಲ್ಲಿ ಬಿರುಕು ಮೂಡುತ್ತಿದ್ದು, ಪಕ್ಷದ ನಾಯಕರು ಮುಗುಮ್ಮಾಗಿ ಕುಳಿತಿದ್ದಾರೆ. ಅಲ್ಲದೆ ಎಎಪಿಯ 21ಕ್ಕೂ ಹೆಚ್ಚು ಶಾಸಕರು ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿ ಅನರ್ಹತೆಯ ಸುಳಿಯಲ್ಲಿದ್ದಾರೆ. ಒಂದು ವೇಳೆ ಇವರು ಅನರ್ಹವಾದರೆ ಅವಧಿಗೂ ಮುನ್ನವೇ ಚುನಾವಣೆಗೆ ಹೋಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಈಗಾಗಲೇ ಕೆಲವು ಶಾಸಕರು ಕೇಜ್ರಿವಾಲ್‌ ವಿರುದ್ಧ ನಿಂತಿರುವುದು ಬಹಿರಂಗವಾಗಿದೆ.

ಇನ್ನು ತಮಿಳುನಾಡಿನಲ್ಲಿ ಜಯಲಲಿತಾ ನಿಧನ ಹೊಂದಿದ ಮೇಲೆ ಎಐಎಡಿಎಂಕೆ ಪಕ್ಷ ಇಬ್ಭಾಗವಾಗಿದೆ. ಪಳನಿಸ್ವಾಮಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದರೂ ಕೇಂದ್ರ ಸರಕಾರದ ಜತೆ ಉತ್ತಮ ಸಂಬಂಧ ಹೊಂದಿರುವುದು ಮುಚ್ಚಿಡುವ ಸಂಗತಿಯೇನಲ್ಲ. ಇನ್ನು ಇನ್ನೊಂದು ಗುಂಪಾದ ಪನ್ನೀರ್‌ ಸೆಲ್ವಂ ಬಣವೂ ಬಿಜೆಪಿ ಜತೆ ಉತ್ತಮ ಬಾಂಧವ್ಯ ಇರಿಸಿಕೊಂಡಿದೆ. ಅಲ್ಲದೆ ರಾಜಕೀಯ ಪ್ರವೇಶಕ್ಕೆ ಸಿದ್ಧವಾಗಿರುವ ರಜನೀಕಾಂತ್‌ ಕೂಡ ಪ್ರಧಾನಿ ಮೋದಿ ಜತೆ ಚೆನ್ನಾಗಿದ್ದಾರೆ. ಇವರು ಪ್ರಾದೇಶಿಕ ಪಕ್ಷ ಕಟ್ಟಿದರೂ ಅದನ್ನು ಮುಂದೆ ಜತೆಯಲ್ಲಿ ಸೇರಿಸಿಕೊಳ್ಳಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಅಲ್ಲದೆ ಎಐಎಡಿಎಂಕೆಯ ಒಂದು ಬಣವನ್ನೂ ಬಿಜೆಪಿಯೊಳಗೆ ವಿಲೀನ ಮಾಡಿಕೊಳ್ಳುವ ಲೆಕ್ಕಾಚಾರವೂ ಇದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.