ಬಿಹಾರ, ಗುಜರಾತ್‌ ಆಯ್ತು ಈಗ ಉ.ಪ್ರ.ದಲ್ಲೂ ರಾಜೀನಾಮೆ ಶಾಕ್‌


Team Udayavani, Jul 30, 2017, 5:20 AM IST

BJP-29-7.jpg

– ಇಬ್ಬರು ಎಸ್ಪಿ, ಓರ್ವ ಬಿಎಸ್‌ಪಿ ಶಾಸಕರಿಂದ ರಾಜೀನಾಮೆ

– ಮೋದಿ, ಯೋಗಿ ಗುಣಗಾನ ಮಾಡಿ ಬಿಜೆಪಿಯತ್ತ ಹೆಜ್ಜೆ

ಲಕ್ನೋ: ಕಾಂಗ್ರೆಸ್‌ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ, ಈಗ ವಿಪಕ್ಷ ಮುಕ್ತ ಭಾರತದತ್ತ ಮುನ್ನುಗ್ಗುತ್ತಿದೆ. ಒಂದೊಂದೇ ರಾಜ್ಯದಲ್ಲಿ ತನ್ನ ಹಿಡಿತ ಸ್ಥಾಪಿಸಿಕೊಳ್ಳುತ್ತಿರುವ ಅದು, ಬಿಹಾರದಲ್ಲಿ ನಿತೀಶ್‌ ಜತೆ ಮರು ಸ್ನೇಹ ಮಾಡಿಕೊಂಡಿತು. ಈಗ ಗುಜರಾತ್‌ ಮತ್ತು ಉತ್ತರಪ್ರದೇಶಗಳಲ್ಲಿ ಆಪರೇಶನ್‌ ಕಮಲ ನಡೆಸಿದ್ದು, ವಿಪಕ್ಷಗಳಿಗೆ ಶಾಕ್‌ ಮೇಲೆ ಶಾಕ್‌ ಕೊಡುತ್ತಿದೆ. ಇದರ ಜತೆಗೆ ದಿಲ್ಲಿ ಮತ್ತು ತಮಿಳುನಾಡಿನ ಮೇಲೆ ಪ್ರಧಾನಿ ಮೋದಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕಣ್ಣಿಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಇಬ್ಬರ ರಾಜೀನಾಮೆ: 2019ರ ಲೋಕಸಭೆ ಚುನಾವಣೆ ಹೊತ್ತಿಗೆ ಪಕ್ಷವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ವಿಪಕ್ಷಗಳ (ಯುಪಿಎ) ಶಾಸಕರನ್ನು ಸೆಳೆಯುತ್ತಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಪ್ರಹಸನದ ಬೆನ್ನಲ್ಲೇ, ಶನಿವಾರ ಸಮಾಜವಾದಿ ಪಕ್ಷ (ಎಸ್‌ಪಿ)ದ ಇಬ್ಬರು, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಓರ್ವ ಶಾಸಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸೇರ್ಪಡೆ ಆಗುತ್ತಿರುವ ಬಗ್ಗೆಯೂ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬುಕ್ಕಲ್‌ ನವಾಬ್‌, ಯಶವಂತ್‌ ಸಿಂಗ್‌ ಹಾಗೂ ಠಾಕೂರ್‌ ಜೈವೀರ್‌ ಸಿಂಗ್‌ ರಾಜೀನಾಮೆ ಸಲ್ಲಿಸಿ ಬಿಜೆಪಿಯತ್ತ ಮುಖಮಾಡಿರುವ ಶಾಸಕರು. ರಾಜೀನಾಮೆ ಬಳಿಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರ ಗುಣಗಾನ ಮಾಡಿದ್ದಾರೆ.

ದಿಲ್ಲಿ, ತಮಿಳುನಾಡು ಮುಂದಿನ ಟಾರ್ಗೆಟ್‌
ಬಿಹಾರ ಆಯ್ತು, ಗುಜರಾತ್‌, ಉತ್ತರ ಪ್ರದೇಶದಲ್ಲೂ ಆಪರೇಷನ್‌ ನಡೆಯುತ್ತಿದೆ. ಇನ್ನು ಮೋದಿ-ಶಾ ಅವರ ಮುಂದಿನ ಗುರಿ ದಿಲ್ಲಿ ಮತ್ತು ತಮಿಳುನಾಡು! ಇಂಥದ್ದೊಂದು ಸುಳಿವು ಬಿಜೆಪಿ ಪಾಳಯದಿಂದಲೇ ಹೊರ ಬಿದ್ದಿದೆ. ದಿಲ್ಲಿಯಲ್ಲಿ ಆಡಳಿತದಲ್ಲಿರುವ ಆಮ್‌ ಆದ್ಮಿ ಪಕ್ಷದಲ್ಲಿ ಬಿರುಕು ಮೂಡುತ್ತಿದ್ದು, ಪಕ್ಷದ ನಾಯಕರು ಮುಗುಮ್ಮಾಗಿ ಕುಳಿತಿದ್ದಾರೆ. ಅಲ್ಲದೆ ಎಎಪಿಯ 21ಕ್ಕೂ ಹೆಚ್ಚು ಶಾಸಕರು ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿ ಅನರ್ಹತೆಯ ಸುಳಿಯಲ್ಲಿದ್ದಾರೆ. ಒಂದು ವೇಳೆ ಇವರು ಅನರ್ಹವಾದರೆ ಅವಧಿಗೂ ಮುನ್ನವೇ ಚುನಾವಣೆಗೆ ಹೋಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಈಗಾಗಲೇ ಕೆಲವು ಶಾಸಕರು ಕೇಜ್ರಿವಾಲ್‌ ವಿರುದ್ಧ ನಿಂತಿರುವುದು ಬಹಿರಂಗವಾಗಿದೆ.

ಇನ್ನು ತಮಿಳುನಾಡಿನಲ್ಲಿ ಜಯಲಲಿತಾ ನಿಧನ ಹೊಂದಿದ ಮೇಲೆ ಎಐಎಡಿಎಂಕೆ ಪಕ್ಷ ಇಬ್ಭಾಗವಾಗಿದೆ. ಪಳನಿಸ್ವಾಮಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದರೂ ಕೇಂದ್ರ ಸರಕಾರದ ಜತೆ ಉತ್ತಮ ಸಂಬಂಧ ಹೊಂದಿರುವುದು ಮುಚ್ಚಿಡುವ ಸಂಗತಿಯೇನಲ್ಲ. ಇನ್ನು ಇನ್ನೊಂದು ಗುಂಪಾದ ಪನ್ನೀರ್‌ ಸೆಲ್ವಂ ಬಣವೂ ಬಿಜೆಪಿ ಜತೆ ಉತ್ತಮ ಬಾಂಧವ್ಯ ಇರಿಸಿಕೊಂಡಿದೆ. ಅಲ್ಲದೆ ರಾಜಕೀಯ ಪ್ರವೇಶಕ್ಕೆ ಸಿದ್ಧವಾಗಿರುವ ರಜನೀಕಾಂತ್‌ ಕೂಡ ಪ್ರಧಾನಿ ಮೋದಿ ಜತೆ ಚೆನ್ನಾಗಿದ್ದಾರೆ. ಇವರು ಪ್ರಾದೇಶಿಕ ಪಕ್ಷ ಕಟ್ಟಿದರೂ ಅದನ್ನು ಮುಂದೆ ಜತೆಯಲ್ಲಿ ಸೇರಿಸಿಕೊಳ್ಳಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಅಲ್ಲದೆ ಎಐಎಡಿಎಂಕೆಯ ಒಂದು ಬಣವನ್ನೂ ಬಿಜೆಪಿಯೊಳಗೆ ವಿಲೀನ ಮಾಡಿಕೊಳ್ಳುವ ಲೆಕ್ಕಾಚಾರವೂ ಇದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.