ಅಮರನಾಥ ಯಾತ್ರಿಕರ ಮೇಲೆ ದಾಳಿ ಗೈದಿದ್ದ 3 ಎಲ್ಇಟಿ ಉಗ್ರರ ಬಂಧನ
Team Udayavani, Aug 6, 2017, 4:39 PM IST
ಶ್ರೀನಗರ: ಮಹತ್ವದ ಕಾರ್ಯಾಚರಣೆಯಲ್ಲಿ ಅನಂತ್ನಾಗ್ ನಲ್ಲಿ ಜುಲೈ 10 ರಂದು ಅಮರನಾಥ ಯಾತ್ರಿಕರ ಮೇಲೆ ಭೀಕರ ದಾಳಿ ನಡೆಸಿದ ಮೂವರು ಉಗ್ರರನ್ನು ಬಂಧಿಸಲಾಗಿದೆ.
ಕಾಶ್ಮೀರದ ಡಿಜಿಪಿ ಮುನೀರ್ ಖಾನ್ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮೂವರು ಉಗ್ರರನ್ನು ಬಂಧಿಸಿರುವ ಕುರಿತು ಮಾಹಿತಿ ನೀಡಿದರು. ದಾಳಿಯನ್ನು ಲಷ್ಕರ್-ಇ-ತೋಯ್ಬಾ ಉಗ್ರರು ನಡೆಸಿದ್ದು, ಬಂಧಿತರ ಪೈಕಿ ಓರ್ವ ಉಗ್ರ ಪಾಕಿಸ್ತಾನದವನಾಗಿದ್ದು, ಇನ್ನಿಬ್ಬರು ಕಾಶ್ಮೀರದವರು ಎಂದು ಮಾಹಿತಿ ನೀಡಿದ್ದಾರೆ.
ಬಂಧಿತರ ವಿಚಾರಣೆ ವೇಳೆ ದಾಳಿಗೆ ಪಾಕ್ ಉಗ್ರ ಸಂಘಟನೆ ಪ್ರೇರಣೆ ನೀಡಿರುವುದು ಕಂಡು ಬಂದಿದೆ. ದಾಳಿಯಲ್ಲಿ ಭಾಗಿಯಾದ ಇನ್ನಿಬ್ಬರು ಉಗ್ರರನ್ನು ಸೇನಾ ಪಡೆಗಳು ಈಗಾಗಲೇ ಹತ್ಯೆಗೈದಿವೆ.
ಉಗ್ರರು ಯಾತ್ರಿಕರ ಬಸ್ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ