ಗಣೇಶೋತ್ಸವ:ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿ ಲಭಿಸಲಿದೆ ಮೋದಕ!
Team Udayavani, Aug 13, 2017, 2:02 PM IST
ಮುಂಬಯಿ: ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ಮುಂಬಯಿ-ಗೋವಾ ನಡುವಣ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುವ ಯಾನಿಗಳಿಗೆ ಗಣಪನ ಅಚ್ಚುಮೆಚ್ಚಿನ ತಿನಿಸಾಗಿರುವ “ಮೋದಕ’ ಲಭಿಸಲಿದೆ. ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಸಾರಿಗೆ ನಿಗಮ (ಐಆರ್ಸಿಟಿಸಿ) ಈ ನಿರ್ಧಾರವನ್ನು ಕೈಗೊಂಡಿದ್ದು ಗಣೇಶೋತ್ಸವ ನಡೆಯಲಿರುವ 10ದಿನಗಳ ಅವಧಿಯಲ್ಲಿ ತೇಜಸ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುವ ಯಾನಿಗಳ ಬಾಯಿಯನ್ನು ಮೋದಕದಿಂದ ಸಿಹಿ ಮಾಡಲು ಮುಂದಾಗಿದೆ.
ಈ ವರ್ಷದ ಮೇ 21ರಂದು ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಂದ ಚಾಲನೆ ನೀಡಲ್ಪಟ್ಟ ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿನ ಅತ್ಯಾಧುನಿಕ ವ್ಯವಸ್ಥೆಗಳು ಮತ್ತು ಸೌಲಭ್ಯಗಳಿಂದಾಗಿ ಬಲುಬೇಗ ಜನಪ್ರಿಯಗೊಂಡಿದೆ. ಗಣೇಶೋತ್ಸವದ ಅವಧಿಯಲ್ಲಿ ಯಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇರುವುದರಿಂದ ಐಆರ್ಸಿಟಿಸಿ ಯಾನಿಗಳಿಗೆ ಮೋದಕವನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಿದ್ದು ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯಾನಿಗಳನ್ನು ತನ್ನತ್ತ ಸೆಳೆಯಲು ಯೋಜನೆ ರೂಪಿಸಿದೆ.
ಮುಂಬಯಿ-ದಿಲ್ಲಿ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಯಾನಿಗಳಿಗೆ ಕಳೆದ ವರ್ಷ ಐಆರ್ಸಿಟಿಸಿ ಮೋದಕವನ್ನು ಪೂರೈಕೆ ಮಾಡಿತ್ತು. ಅಲ್ಲದೆ ವಿವಿಧ ಹಬ್ಬಗಳ ಸಂದರ್ಭಗಳಲ್ಲಿ ಪೇಡಾ, ಜಿಲೇಬಿ..ಮತ್ತಿತರ ಸಿಹಿತಿನಿ ಸುಗಳನ್ನು ಯಾನಿಗಳಿಗೆ ಒದಗಿಸುತ್ತಾ ಬಂದಿದೆ. ಐಆರ್ಸಿಟಿಸಿಯ ಈ ಕ್ರಮ ಪ್ರಶಂಸೆಗೆ ಪಾತ್ರವಾಗಿದೆ ಎಂದು ಐಆರ್ಸಿಟಿಸಿಯ ವಕ್ತಾರರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ