ಗಣೇಶೋತ್ಸವ:ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿ ಲಭಿಸಲಿದೆ ಮೋದಕ!
Team Udayavani, Aug 13, 2017, 2:02 PM IST
ಮುಂಬಯಿ: ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ಮುಂಬಯಿ-ಗೋವಾ ನಡುವಣ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುವ ಯಾನಿಗಳಿಗೆ ಗಣಪನ ಅಚ್ಚುಮೆಚ್ಚಿನ ತಿನಿಸಾಗಿರುವ “ಮೋದಕ’ ಲಭಿಸಲಿದೆ. ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಸಾರಿಗೆ ನಿಗಮ (ಐಆರ್ಸಿಟಿಸಿ) ಈ ನಿರ್ಧಾರವನ್ನು ಕೈಗೊಂಡಿದ್ದು ಗಣೇಶೋತ್ಸವ ನಡೆಯಲಿರುವ 10ದಿನಗಳ ಅವಧಿಯಲ್ಲಿ ತೇಜಸ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುವ ಯಾನಿಗಳ ಬಾಯಿಯನ್ನು ಮೋದಕದಿಂದ ಸಿಹಿ ಮಾಡಲು ಮುಂದಾಗಿದೆ.
ಈ ವರ್ಷದ ಮೇ 21ರಂದು ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಂದ ಚಾಲನೆ ನೀಡಲ್ಪಟ್ಟ ತೇಜಸ್ ಎಕ್ಸ್ಪ್ರೆಸ್ ರೈಲಿನಲ್ಲಿನ ಅತ್ಯಾಧುನಿಕ ವ್ಯವಸ್ಥೆಗಳು ಮತ್ತು ಸೌಲಭ್ಯಗಳಿಂದಾಗಿ ಬಲುಬೇಗ ಜನಪ್ರಿಯಗೊಂಡಿದೆ. ಗಣೇಶೋತ್ಸವದ ಅವಧಿಯಲ್ಲಿ ಯಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇರುವುದರಿಂದ ಐಆರ್ಸಿಟಿಸಿ ಯಾನಿಗಳಿಗೆ ಮೋದಕವನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಿದ್ದು ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯಾನಿಗಳನ್ನು ತನ್ನತ್ತ ಸೆಳೆಯಲು ಯೋಜನೆ ರೂಪಿಸಿದೆ.
ಮುಂಬಯಿ-ದಿಲ್ಲಿ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಯಾನಿಗಳಿಗೆ ಕಳೆದ ವರ್ಷ ಐಆರ್ಸಿಟಿಸಿ ಮೋದಕವನ್ನು ಪೂರೈಕೆ ಮಾಡಿತ್ತು. ಅಲ್ಲದೆ ವಿವಿಧ ಹಬ್ಬಗಳ ಸಂದರ್ಭಗಳಲ್ಲಿ ಪೇಡಾ, ಜಿಲೇಬಿ..ಮತ್ತಿತರ ಸಿಹಿತಿನಿ ಸುಗಳನ್ನು ಯಾನಿಗಳಿಗೆ ಒದಗಿಸುತ್ತಾ ಬಂದಿದೆ. ಐಆರ್ಸಿಟಿಸಿಯ ಈ ಕ್ರಮ ಪ್ರಶಂಸೆಗೆ ಪಾತ್ರವಾಗಿದೆ ಎಂದು ಐಆರ್ಸಿಟಿಸಿಯ ವಕ್ತಾರರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ