ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ದರೋಡೆ; ಪ್ರಯಾಣಿಕರು ಕಂಗಾಲು
Team Udayavani, Aug 16, 2017, 3:55 PM IST
ನವದೆಹಲಿ: ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಮತ್ತು ಬರಿಸಿ ಸುಮಾರು 12 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ಬುಧವಾರ ನಡೆದಿದೆ.
ತಮ್ಮ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿರುವುದಾಗಿ ಆಗಸ್ಟ್ ಕ್ರಾಂತಿ ರಾಜಧಾನಿ ರೈಲಿನ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ದೂರು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ರೈಲಿನ 8, 10 ಬೋಗಿಗಳಲ್ಲಿ ಈ ಘಟನೆ ನಡೆದಿದೆ. ಅಲ್ಲದೆ ರೈಲಿನಲ್ಲಿ ಸೂಕ್ತ ಭದ್ರತಾ ಸಿಬ್ಬಂದಿಯೇ ಇರಲಿಲ್ಲವಾಗಿತ್ತು ಎಂದು ಮಹಿಳಾ ಪ್ರಯಾಣಿಕರೊಬ್ಬರು ದೂರಿದ್ದಾರೆ. ಆಕೆಯ ಚಿನ್ನಾಭರಣ ಹಾಗೂ 50 ಸಾವಿರ ನಗದು ಕಳ್ಳತನವಾಗಿರುವುದಾಗಿ ತಿಳಿಸಿದ್ದಾರೆ.
ಪ್ರಯಾಣಿಕರು ನೀಡಿರುವ ಮಾಹಿತಿ ಪ್ರಕಾರ, ಬಹುತೇಕ ಪ್ರಯಾಣಿಕರು ದಿಢೀರ್ ಆಗಿ ನಿದ್ರೆಗೆ ಜಾರಿದ್ದರು. ಬಳಿಕ ಎಚ್ಚರವಾದಾಗ ನಮ್ಮ, ನಮ್ಮ ಪರ್ಸ್ ಗಳು ನಾಪತ್ತೆಯಾಗಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರಾದ ಅಲ್ಕಾ ಜೈನ್ ಅವರ ಪರ್ಸ್, ಐ ಫೋನ್, ಪಾಸ್ ಪೋರ್ಟ್, ಆಧಾರ್ ಕಾರ್ಡ್ ಹಾಗೂ 18 ಸಾವಿರ ರೂ. ನಗದು ಕಳವಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದು ಬೋಗಿಯಲ್ಲಿ ಬೊಬ್ಬೆ ಕೇಳಿಸಿದಾಗ ಅಲ್ಲಿ ಹೋಗಿ ನೋಡಿದಾಗಲೂ ಆಕೆಯ ಪರ್ಸ್ ಕಳ್ಳತನವಾಗಿರುವುದು ಗಮನಕ್ಕೆ ಬಂದಿತ್ತು ಎಂದು ಹೇಳಿದ್ದಾರೆ.
ಸುಮಾರು ಆರು ಮಂದಿ ಪ್ರಯಾಣಿಕರನ್ನು ದರೋಡೆ ಮಾಡಲಾಗಿದೆ. ಈ ಬಗ್ಗೆ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್