ನಾನು ಆರೋಗ್ಯವಾಗಿದ್ದೇನೆ; ವದಂತಿಗಳಿಗೆ ತೆರೆ ಎಳೆದ ಪರ್ರಿಕರ್
Team Udayavani, Aug 20, 2017, 10:31 AM IST
ಪಣಜಿ :’ನಾನು ಕ್ಷೇಮವಾಗಿದ್ದೇನೆ, ಯಾವುದೇ ಆರೋಗ್ಯ ಸಮಸ್ಯೆ ಹೊಂದಿಲ್ಲ’ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೇಳಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪರ್ರಿಕರ್ ವಿದ್ಯಾರ್ಥಿಯೊಬ್ಬ ನಿಮ್ಮ ಆರೋಗ್ಯ ಹೇಗಿದೆ ಎಂದು ಕೇಳಿದಾಗ ‘ನಾನು ಆರೋಗ್ಯವಾಗಿದ್ದೇನೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿವೆ’ ಎಂದಿದ್ದಾರೆ.
’10 ವರ್ಷಗಳ ಹಿಂದೆ ನಾನು ಆ್ಯಂಜಿಯೋಪ್ಲಾಸ್ಟಿ ಸರ್ಜರಿಗೆ ಒಳಗಾಗಿದ್ದೆ , ಹೀಗಾಗಿ ಎಂದಿನಂತೆ ಆಸ್ಪತ್ರೆಗೆ ಪರೀಕ್ಷೆಗೆ ತೆರಳಿದ್ದೆ. ಸಣ್ಣ ಪ್ರಮಾಣದ ಬ್ಲಾಕ್ ಇರುವ ಬಗ್ಗೆ ವೈದ್ಯರು ಹೇಳಿದರು. ತಕ್ಷಣ ಚಿಕಿತ್ಸೆ ಪಡೆದು 3 ರಿಂದ 4 ಗಂಟೆಗಳ ಒಳಗೆ ನಾನು ಆಸ್ಪತ್ರೆಯಿಂದ ಹೊರಗೆ ಬಂದಿದ್ದೇನೆ’ ಎಂದರು.
‘ಎಲ್ಲರಿಗೂ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ. ನನಗೆ ಬೇರೆ ಯಾವುದೇ ಸಮಸ್ಯೆ ಇಲ್ಲ. ನಾನು ದೆಹಲಿಯಲ್ಲಿದ್ದಾಗ 85 ಕೆ.ಜಿ ಇದ್ದೆ , ಈಗ 75 ಕೆ.ಜಿಗೆ ಇಳಿದಿದ್ದೇನೆ. ನನ್ನ ಆರೋಗ್ಯವನ್ನು ನಾನು ಕಾಪಾಡಿಕೊಳ್ಳುತ್ತೇನೆ. ಯಾರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ’ ಎಂದರು.
ಪರ್ರಿಕರ್ ಅವರು ಕೇಂದ್ರ ರಕ್ಷಣಾ ಸಚಿವ ಸ್ಥಾನ, ರಾಜ್ಯ ಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಹೀಗಾಗಿ ವಿಧಾನಸಭೆಗೆ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹುಲ್ಲಾಮಾಲು ಕ್ಷೇತ್ರದ ಬಿಜೆಪಿ ಶಾಸಕ ರಾಜೀನಾಮೆ ನೀಡಿ ಪರ್ರಿಕರ್ ಅವರ ಸ್ಫರ್ಧೆಗೆ ಅನುವು ಮಾಡಿಕೊಟ್ಟಿದ್ದರು. ಅಗಸ್ಟ್ 23 ರಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ