ರಾಜಕಾರಣಿಗಳೇ ಟಾರ್ಗೆಟ್‌!; ಸುರಸುಂದರ ದರೋಡೆಕೋರ ಸೆರೆ 


Team Udayavani, Aug 22, 2017, 10:35 AM IST

11.jpg

ಹೊಸದಿಲ್ಲಿ : ದೇಶವನ್ನು ಅತೀ ಹೆಚ್ಚು ಲೂಟಿ ಹೊಡೆದದ್ದು ಯಾರು ಎಂದರೆ ರಾಜಕಾರಣಿಗಳು ಎನ್ನುವುದು ಹೆಚ್ಚಿನವರ ಅಂಬೋಣ. ಆದರೆ ಈ ಖತರ್ನಾಕ್‌ ಕಳ್ಳ ಮಾತ್ರ ಹಾಗಲ್ಲ ರಾಜಕಾರಣಿಗಳನ್ನೇ ಗುರಿಯಾಗಿರಿಸಿಕೊಂಡು ದರೋಡೆ ಮಾಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಗ್ರಾಫಿಕ್‌ ಡಿಸೈನರ್‌ ಆಗಿರುವ  27 ರ ಹರೆಯದ ಸಿದ್ಧಾರ್ಥ್ ಮೆಹರೋತ್ರಾ ಎಂಬ ಬ್ಯಾಂಕ್‌ ಮ್ಯಾನೇಜರ್‌ವೊಬ್ಬರ ಮಗ ದೆಹಲಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳ  ಆರೋಪಿಯಾಗಿ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ. 

ಬಾಲಿವುಡ್‌ ನಟರಂತೆ ಅಂಗ ಸೌಷ್ಟವವುಳ್ಳ ಸಿದ್ದಾರ್ಥ್ ನ ತನ್ನ ಐಷಾರಾಮಿ ಜೀವನಕ್ಕಾ ಗಿ ಕಳ್ಳತನ ಮತ್ತು ದರೋಡೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಜಕಾರಣಿಗಳು,ಅಧಿಕಾರಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್‌ ಆಗಿದ್ದು , ಜನವರಿಯಿಂದ ನಡೆದ ಹಲವು ಪ್ರಕರಣ ಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ದೆಹಲಿಯ ದಕ್ಷಿಣ ವಲಯ ಡಿಜಿಪಿ ಟೈಮ್ಸ್‌ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಶ್ರೀಮಂತರ ಮನೆಗಳಲ್ಲಿ ನಡೆದ ಹಲವು ಕಳವು ಪ್ರಕರಣಗಳಿಗೆ ಸಂಬಂಧಿಸಿ ವಸಂತ್‌ಕುಂಜ್‌ನ ಪೊಲೀಸ್‌ ತಂಡ ಕಾರ್ಯಾಚರಣೆಗಿಳಿದ ವೇಳೆ ಸಿದ್ಧಾರ್ಥ್ ಬಲೆಗೆ ಬಿದ್ದಿದ್ದಾನೆ.

ಸಿದ್ದಾರ್ಥ್ ನ ಫೇಸ್‌ ಬುಕ್‌ ಪರಿಶೀಲಿಸಿದಾಗ ಪೊಲೀಸರು ಆಘಾತಗೊಂಡಿದ್ದು, ಐಷಾರಾಮಿ ಕಾರಾದ ಫೋರ್ಡ್‌ ಇಕೋಸ್ಫೋರ್ಟ್ಸ್ ಕಾರಿನ ಎದುರು ಕುಳಿತಿದ್ದು ,ಅಲ್ಲಿ ನಂಬರ್‌ ಪ್ಲೇಟ್‌ ಸ್ಪಷ್ಟವಾಗಿ ಕಾಣುತ್ತಿತ್ತು. ಲೇಹ್‌ನಲ್ಲಿ ಕ್ಲಿಕ್ಕಿಸಿಕೊಂಡ ಚಿತ್ರ ಇದಾಗಿತ್ತು. ಕಾರು ವಿಕಾಸ್‌ ಎಂಬ ಸಿದ್ದಾರ್ಥ್ ನ ಸ್ನೇಹಿತನದ್ದಾಗಿದ್ದು ಪ್ರವಾಸಕ್ಕೆ ಜೊತೆಯಲ್ಲಿ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಕುಮಾರ್‌ ಪೊಲೀಸರಿಗೆ ಮಾಹಿತಿ ನೀಡಿದ್ದು, ಪಿತಾಂಪುರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸಿದ್ಧಾರ್ಥ್ನನ್ನು ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧನದ ವೇಳೆ ಶೆವರ್ಲೆಟ್‌ ಕ್ರೂಝ ಕಾರು, ಅಮೆರಿಕದ ನೋಟುಗಳು ಸೇರಿದಂತೆ 10 ದೇಶಗಳ ವಿದೇಶಿ ನೋಟುಗಳು,11 ಚಿನ್ನದ ಸರಗಳು, 4 ಉಂಗುರಗಳು, 2 ಜೊತೆ ಕಿವಿಯೋಲೆಗಳು,2 ಚಿನ್ನದ ಬಳೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದೆಲ್ಲವನ್ನೂ ಕಳ್ಳತನ ಮಾಡಿರುವುದಾಗಿ ಸಿದ್ದಾರ್ಥ್ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

2015 ರಲ್ಲೂ ಸಿದ್ದಾರ್ಥ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.ಆದರೂ ತನ್ನ ಚಾಳಿ ಮುಂದುವರಿಸಿದ್ದ. 

ಈತನ ಕೃತ್ಯಕ್ಕೆ ಸಾಥ್‌ ನೀಡುತ್ತಿದ್ದ ಜಿತೇಂದರ್‌ ಮತ್ತು ಅನುರಾಗ್‌ ಸಿಂಗ್‌ ಎನ್ನುವವರನ್ನೂ ವಶಕ್ಕೆ ಪಡೆಯಲಾಗಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.