ಮಳೆ ಕಮ್ಮಿ: ಕರ್ನಾಟಕ ಸೇರಿ 17 ರಾಜ್ಯಗಳಲ್ಲಿ ಬರ ಛಾಯೆ


Team Udayavani, Sep 12, 2017, 8:25 AM IST

drought.jpg

ಹೊಸದಿಲ್ಲಿ: ಸದ್ಯ ಬೆಂಗಳೂರು ಸೇರಿದಂತೆ ಕರ್ನಾಟಕ ಮತ್ತು ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಬಂದಿದೆ. ಹೀಗಾಗಿ, ವಾ ಎಂಥ ಮಳೆಗಾಲ ಎಂದು ಸಾಮಾನ್ಯವಾಗಿ ಅಂದುಕೊಳ್ಳಲಾಗುತ್ತದೆ. ಆದರೆ ವಾಸ್ತವ ಬೇರೆಯೇ ಇದೆ. ಇನ್ನೇನು ಮೂರು ವಾರಗಳಲ್ಲಿ ಹಾಲಿ ಹಂಗಾಮಿನ ನೈಋತ್ಯ ಮುಂಗಾರು ಮುಕ್ತಾಯವಾಗಲಿದೆ. ನಂತರದ ದಿನಗಳಲ್ಲಿ ಕರ್ನಾಟಕ ಸೇರಿದಂತೆ 17 ರಾಜ್ಯಗಳ 225 ಜಿಲ್ಲೆಗಳಲ್ಲಿ ಬರಗಾಲ ಕಾಣಿಸಿಕೊಳ್ಳಲಿದೆ. ಹೀಗೆಂದು ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಬರಗಾಲ ಪರಿಶೀಲನಾ ವ್ಯವಸ್ಥೆ (ಎನ್‌ಎಡಿಎಎಂಎಸ್‌) ಎಚ್ಚರಿಕೆ ನೀಡಿದೆ.

ಹೆಚ್ಚು ಪರಿಣಾಮ ಎದುರಿಸುವ ರಾಜ್ಯಗಳೆಂದರೆ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌. ಈಗಾಗಲೇ ಈ ರಾಜ್ಯಗಳಲ್ಲಿ ಪರಿಸ್ಥಿತಿ ಉತ್ತಮವೇನೂ ಇಲ್ಲ. ಹೀಗಿದ್ದಾಗಿಯೂ ಆಯಾ ರಾಜ್ಯ ಸರಕಾರಗಳು ರೈತರ ಸಾಲ ಮನ್ನಾ ಮಾಡಿ ಅದನ್ನು ಪಾವತಿ ಮಾಡಲು ಹಿಂದೆ ಮುಂದೆ ನೋಡುವಂತಾಗಿದೆ.

ದೇಶಾದ್ಯಂತ ಸುರಿದ ಮಳೆ ಮತ್ತು ಅದರ ಪ್ರಭಾವದ ವರದಿಯನ್ನು ಈ ತಿಂಗಳಲ್ಲೇ ಬಿಡುಗಡೆ ಮಾಡಲಾಗುತ್ತದೆ. ಜುಲೈನಲ್ಲಿ ಸುರಿದ ಮಳೆ ಆಧರಿಸಿ ಆಗಸ್ಟ್‌ನಲ್ಲಿ ವರದಿ ಬಿಡುಗಡೆ ಮಾಡಲಾಗಿತ್ತು. ಅದರ ಪ್ರಕಾರ 104 ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ ಉಂಟಾಗಬಹುದು ಎಂದು ಅಂದಾಜಿಸಲಾಗಿತ್ತು. ರಾಷ್ಟ್ರೀಯ ಬೆಳೆ ಮುನ್ಸೂಚನಾ ಕೇಂದ್ರ (ಎನ್‌ಸಿಎಫ್ಸಿ)ದ ನಿರ್ದೇಶಕ ಎಸ್‌.ಎಸ್‌.ರಾಯ್‌ ಹೇಳುವ ಪ್ರಕಾರ ದೇಶಾದ್ಯಂತ ಉತ್ತಮವಾಗಿಯೇ ಮಳೆಯಾಗಿದೆ. ಆದರೆ ಒಣ ಹವೆಯ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ. 

ಎನ್‌ಸಿಎಫ್ಸಿ ಸಂಗ್ರಹಿಸಿದ ಮಾಹಿತಿ ಪ್ರಕಾರ, ಹೆಚ್ಚು ಆಹಾರ ಬೆಳೆಯುವ ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್‌, ಮಧ್ಯಪ್ರದೇಶ ಮತ್ತು ಹರ್ಯಾಣದಲ್ಲಿನ ಜಿಲ್ಲೆಗಳು ಹೆಚ್ಚು ಬಾಧಿತವಾಗಿವೆ. ಇನ್ನುಳಿದಂತೆ ಕರ್ನಾಟಕ, ಬಿಹಾರ, ಜಾರ್ಖಂಡ್‌, ಛತ್ತೀಸ್‌ಗಢ, ತೆಲಂಗಾಣ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಲ್ಲಿನ ಜಿಲ್ಲೆಗಳೂ ಬರದ ಛಾಯೆ ಅನುಭವಿಸುತ್ತಿವೆ. 

ಉತ್ಪಾದನೆಗೆ ತೊಂದರೆ ಇಲ್ಲ
ಕೇಂದ್ರ ಕೃಷಿ ಸಚಿವಾಲಯ ಹೇಳಿಕೊಳ್ಳುವಂತೆ ಇದರಿಂದ ಒಟ್ಟಾರೆ ಆಹಾರ ಉತ್ಪಾದನೆಗೆ ತೊಂದರೆಯಾಗಲಾರದು. ಆದರೆ ಕಳೆದ ಶುಕ್ರವಾರ ಬಿಡುಗಡೆ ಮಾಡಿದ ದೇಶಾ ದ್ಯಂತದ ಬೀಜ ಬಿತ್ತನೆ ಪ್ರದೇಶದ ಮಾಹಿತಿ ಗಮನಿಸಿದರೆ ಶೇ.3ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. 

ಸಾಧ್ಯವೇ ಇಲ್ಲ
ಬೇಳೆ ಕಾಳುಗಳನ್ನು ಬ್ರೆಜಿಲ್‌ನಿಂದ ಆಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಅದೂ ರೈತರ ಹಿತದೃಷ್ಟಿಯನ್ನು ಕಡೆಗಣಿಸಿ ಇಂಥ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ, ಶೇ.3ರಷ್ಟು ಕೊರತೆಯಾಗಲಿದೆ ಎಂಬ ಕೇಂದ್ರದ ವಾದವನ್ನು ಒಪ್ಪಿಕೊಳ್ಳಲಾಗದು ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಆಹಾರ ಭದ್ರತೆಯನ್ನು ಅದು ಕಾಪಾಡಿದರೂ ರೈತರ ಹಿತವನ್ನು ಅದು ಕಡೆಗಣಿಸುತ್ತದೆ ಎಂಬ ವಾದ ಅವರದ್ದು.

ರೈತರ ಪ್ರತಿಭಟನೆ
ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶಗಳಲ್ಲಿ ಬರಗಾಲದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಮಧ್ಯಪ್ರದೇಶ ದಲ್ಲಿ ರೈತರ ಪ್ರತಿಭಟನೆ ವೇಳೆ ಗೋಲಿಬಾರ್‌ ನಡೆದಿದ್ದರಿಂದ ಇಬ್ಬರು ರೈತರು ಅಸುನೀಗಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.