ಬಯಲು ಶೌಚ ಎಸಗಿದ ಮಧ್ಯಪ್ರದೇಶ ಸರಕಾರಿ ಶಿಕ್ಷಕ ಅಮಾನತು
Team Udayavani, Sep 13, 2017, 4:06 PM IST
ಭೋಪಾಲ್ : ತೆರೆದ ಬಯಲಲ್ಲೇ ಮಲ ವಿಸರ್ಜಿಸಿದ ಸರಕಾರಿ ಶಾಲೆಯ ಶಿಕ್ಷಕನೋರ್ವನನ್ನು ಮಧ್ಯ ಪ್ರದೇಶ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ.
ಮಧ್ಯಪ್ರದೇಶದ ಅಶೋಕ್ನಗರ ಜಿಲ್ಲೆಯ ಶಿಕ್ಷಣಾಧಿಕಾರಿ, ಬಯಲು ಶೌಚ ನಡೆಸಿದ ಸರಕಾರಿ ಶಾಲಾ ಶಿಕ್ಷಕನ ಈ ಕೃತ್ಯವು ದುರ್ನಡತೆಯಾಗಿದೆಯಲ್ಲದೆ ಸರಕಾರಿ ಮಾರ್ಗದರ್ಶಿ ಸೂತ್ರಗಳ ನೇರ ಉಲ್ಲಂಘನೆಯಾಗಿರುವುದರಿಂದ ಆತನನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿ ಶಿಕ್ಷಕನನ್ನು ಅಶೋಕನಗರ ಜಿಲ್ಲೆಯ ಬುಡೇರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆರೋಪಿ ಶಿಕ್ಷಕನಿಂದ ಸರಕಾರದ ಸ್ವಚ್ಚ ಭಾರತ ಅಭಿಯಾನದ ಉಲ್ಲಂಘನೆಯಾಗಿದೆ ಎಂದವರು ಹೇಳಿದರು.
ಈ ವರ್ಷ ಜೂನ್ ತಿಂಗಳಲ್ಲಿ ಮಧ್ಯ ಪ್ರದೇಶದ ರೈಸೇನ್ ಜಿಲ್ಲೆಯ ವೀರ್ಪುರ್ ಗ್ರಾಮದ 13 ಕುಟುಂಬಗಳು ಬಯಲು ಶೌಚ ನಡೆಸಿದ ಅಪರಾಧಕ್ಕಾಗಿ ಸುಮಾರು ನಾಲ್ಕು ಲಕ್ಷ ರೂ. ದಂಡವನ್ನು ಪಂಚಾಯತ್ ಅಧಿಕಾರಿಗಳು ವಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ