ಬ್ಲೂ ವೇಲ್‌ ಆಟ: ಕೇಂದ್ರ ಸರಕಾರದ ಎಚ್ಚರಿಕೆ ಸುತ್ತೋಲೆ


Team Udayavani, Sep 16, 2017, 8:04 AM IST

16-PTI-4.jpg

ಹೊಸದಿಲ್ಲಿ: “ಹೆತ್ತವರೇ ನಿಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡುತ್ತಿದ್ದಾರೆ ಎನ್ನುವುದನ್ನು ಗಮನಿಸಿ. ಬ್ಲೂ ವೇಲ್‌ ಚಾಲೆಂಜ್‌ ಗೇಮ್‌ ಬಗ್ಗೆ ಅಗತ್ಯವಿಲ್ಲದೆ ಮಕ್ಕಳ ಎದುರು ಮಾತನಾಡಬೇಡಿ.’ ದೇಶದಲ್ಲಿ  ಮಾರಕ ಗೇಮ್‌ನಿಂದ ಒಂಬತ್ತು ಮಂದಿ ಆತ್ಮಹತ್ಯೆಗೆ ಶರಣಾದ ಬಳಿಕ ಶುಕ್ರವಾರ ಕೇಂದ್ರ ಸರಕಾರ ಎಚ್ಚರಿಕೆಯ ಸುತ್ತೋಲೆ ಹೊರಡಿಸಿದೆ. ಮಕ್ಕಳ ಎದುರು ಕುತೂಹಲಕ್ಕಾಗಿ ಗೇಮ್‌ ಬಗ್ಗೆ ಮಾತನಾಡಿದರೆ ಅವರು ಅದರ ಬಗ್ಗೆ ಕುತೂಹಲ ದಿಂದ ಇಂಟರ್‌ನೆಟ್‌ನಲ್ಲಿ ಹುಡು ಕಾಡಬಹುದು. ಹೀಗಾಗಿ ಅದನ್ನು ನಡೆಸದಂತೆ ಮನವಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ ನೋಟಿಸ್‌: ಈ ನಡುವೆ ಗೇಮ್‌ ಮೇಲೆ ನಿಷೇಧ ಹೇರಲು ಕೇಂದ್ರಕ್ಕೆ ನಿರ್ದೇಶ ನೀಡು ವಂತೆ ಒತ್ತಾಯಿಸಿ ಮಧುರೈಯ ಎನ್‌.ಎಸ್‌. ಪೊನ್ನಯ್ಯನ್‌ (73) ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಕೋರ್ಟ್‌ ಸರಕಾರಕ್ಕೆ  ನೋಟಿಸ್‌ ಜಾರಿ ಮಾಡಿದೆ. ಜತೆಗೆ ಈ ನಿಟ್ಟಿನಲ್ಲಿ  ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ನೆರವು ನೀಡಬೇಕು ಎಂದು ಕೋರಿದೆ. ಮಧುರೈಯಲ್ಲಿನ ಪ್ರಕರಣದ ಬಳಿಕ ಅವರು ಸುಪ್ರೀಂಗೆ ಮನವಿ ಮಾಡಿದ್ದರು.

ಸಲಹೆಗಳೇನು?

ಖನ್ನತೆಗೆ ಒಳಗಾಗಿದ್ದರೆ, ಅವರನ್ನು ಮಾತನಾಡಿಸಿ ವಿವರ ಪಡೆದುಕೊಳ್ಳಬೇಕು. ಯಾವುದೇ ಹಂತದಲ್ಲಿ ಅವರಿಗೆ ಬೆಂಬಲವಾಗಿ ಹೆತ್ತವರು ನಿಲ್ಲಬೇಕು.

ಹೆತ್ತವರು ಮತ್ತು ಪೋಷಕರು ತಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ  ಯಾವುದನ್ನು ನೋಡುತ್ತಿದ್ದಾರೆ ಎಂಬ ಬಗ್ಗೆ ಹೆಚ್ಚು  ಗಮನಹರಿಸಬೇಕು.

ಸಾಮಾಜಿಕ ಜಾಲತಾಣಗಳಲ್ಲಿ ರಹಸ್ಯವಾಗಿ ಅದು ಹರಿದಾಡುತ್ತಿದೆ. ಅದು ಆತ್ಮಹತ್ಯೆಗೆ ಪ್ರೇರಣೆ ನೀಡುವುದರಿಂದ ಖನ್ನತೆಗೆ ಒಳಗಾಗಿರುವವರನ್ನೇ ಆಟಕ್ಕೆ ಸೇರ್ಪಡೆ ಯಾಗುವಂತೆ ಪ್ರೇರೇಪಿಸುತ್ತದೆ.

ಅಸಹಜವಾಗಿ ಮಕ್ಕಳು ವರ್ತಿಸುತ್ತಿದ್ದರೆ ಹೆತ್ತವರು ಈ ಬಗ್ಗೆ ಗಮನ ಹರಿಸಬೇಕು. ಬ್ಲೂ ವೇಲ್‌ ಆಡುವವರು ದೇಹದ ಭಾಗಗಳಲ್ಲಿ ಆಳವಾದ ಗಾಯ ಮಾಡಿಕೊಳ್ಳುತ್ತಾರೆ.

ಎಂದಿಗಿಂತ ಹೆಚ್ಚಿನ ಸಮಯವನ್ನು ಜಾಲತಾಣಗಳಲ್ಲಿ  ಮಕ್ಕಳು ಕಳೆಯುತ್ತಿದ್ದಾರೆ ಎಂದರೆ ಅದರ ಬಗ್ಗೆ ಎಚ್ಚರಿಕೆ ವಹಿಸಿ. ವರ್ತನೆ ಬದಲಾಗಿದ್ದರೆ ಮಕ್ಕಳನ್ನು ವಿಚಾರಿಸಿ.

ಮಕ್ಕಳ ಮೊಬೈಲ್‌, ಕಂಪ್ಯೂಟರ್‌ಗಳಲ್ಲಿ  ಹೊಸ ಸಂಪರ್ಕ ಸಂಖ್ಯೆ, ಇ-ಮೇಲ್‌ಗ‌ಳಿದ್ದರೆ ಗಮನಿಸಿ.

ಮೊಬೈಲ್‌ ಮತ್ತು ಕಂಪ್ಯೂಟರ್‌ಗಳಲ್ಲಿ  ಉತ್ತಮ ದರ್ಜೆಯ ಪೇರೆಂಟಲ್‌ ಲಾಕ್‌ ಅಳವಡಿಸಿ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.