ಬಿಜೆಪಿ ಸಂಸದ ಮಹಂತ ಚಂದ್ರನಾಥ್ ವಿಧಿವಶ
Team Udayavani, Sep 17, 2017, 9:58 AM IST
ಅಲ್ವಾರ್ : ರಾಜಸ್ಥಾನದ ಬಿಜೆಪಿ ಸಂಸದ ಮಹಂತ್ ಚಂದ್ರನಾಥ್ (61)ಅವರು ಶನಿವಾರ ತಡರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಎನ್ಐ ವರದಿಯಂತೆ ಇಂದು ಭಾನುವಾರ ಸಂಜೆ ಹರಿಯಾಣಾದ ರೋಹಟಕ್ ನಲ್ಲಿ ಅಂತಿಮ ವಿಧಿವಿದಾನಗಳು ನಡೆಯಲಿವೆ.
ನಾಥ ಪರಂಪರೆಯ ಸನ್ಯಾಸಿಯಾಗಿದ್ದ ಚಂದ್ರನಾಥ್ ಮಸ್ತ್ ನಾಥ್ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.
2014 ರಲ್ಲಿ ಉಪಚುನಾವಣೆಯಲ್ಲಿ ಬೆಹರೂರ್ ಕ್ಷೇತ್ರದಲ್ಲಿ ಜಯಗಳಿಸಿದ್ದ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಅಲ್ವಾರ್ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಜಿತೇಂದ್ರ ಸಿಂಗ್ ಅವರನ್ನು ಮಣಿಸಿದ್ದರು.
2017 ಫೆಬ್ರವರಿ ತಿಂಗಳಿನಲ್ಲಿ ಹರಿಯಾಣ ಕೋರ್ಟ್ ಭೂಹಗರಣವೊಂದಕ್ಕೆ ಸಂಬಂಧಿಸಿ ಕ್ರಿಮಿನಲ್ ಪಿತೂರಿ ಸಾಬೀತಾದ ಹಿನ್ನಲೆಯಲ್ಲಿ ಚಂದ್ರನಾಥ್ಗೆ 1 ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್