ರೈತರೇ ಎಚ್ಚರ, ಸುಳ್ಳು ಹೇಳಿದ್ರೆ ಇಸ್ರೋಗೆ ಸಿಕ್ಕಿ ಬೀಳ್ತೀರಿ!


Team Udayavani, Sep 20, 2017, 7:45 AM IST

20-PTI-2.jpg

ನವದೆಹಲಿ: ಕೃಷಿ ಆದಾಯದ ನೆಪ ಹೇಳಿ ತೆರಿಗೆ ತಪ್ಪಿಸಿಕೊಳ್ಳುತ್ತಿರುವ ಶ್ರೀಮಂತ ರೈತರು ನೀವಾಗಿದ್ದರೆ, ಕೂಡಲೇ ಬೆವರೊರೆಸಿಕೊಳ್ಳಿ. ಕೃಷಿಯೇ ಮಾಡದ ಬರಡು ಭೂಮಿಯನ್ನು ತೋರಿಸಿ, ಕೃಷಿ ಭೂಮಿ ಎಂದು ಸರ್ಕಾರದ ಕಣ್ಣಿಗೆ ಮಣ್ಣೆರೆಚುವ ನಿಮ್ಮ ಆಟ ಇನ್ನು ಮುಂದೆ ನಡೆಯಲ್ಲ. 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು “ಸ್ಯಾಟಲೈಟ್‌ ಸಾಕ್ಷಿ’ಯೊಂದಿಗೇ ನಿಮ್ಮ ಮನೆಗೆ ಎಡತಾಕಲಿದ್ದಾರೆ! ಇದನ್ನು ನೀವು ನಂಬಲೇಬೇಕು. ತಲಾ 50 ಲಕ್ಷ ರೂ. ಕೃಷಿ ಆದಾಯ ಪಡೆಯುತ್ತಿದ್ದರೂ, ಸರ್ಕಾರಕ್ಕೆ ಯಾಮಾರಿಸುತ್ತಾ ತೆರಿಗೆ ವಿನಾಯ್ತಿ ಪಡೆಯುತ್ತಿರುವ 50 ಮಂದಿ ಶ್ರೀಮಂತ ರೈತರ ಪಟ್ಟಿ ಈಗಾಗಲೇ ಐಟಿ ಇಲಾಖೆಯ ಕೈಸೇರಿದೆ. ಇಂಥ ಇನ್ನಷ್ಟು ರೈತರ ಮೇಲೆ ನಿಗಾ ಇಡಲಿರುವ ಇಲಾಖೆ, ತೆರಿಗೆ ತಪ್ಪಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಿದೆ.

ಉಪಗ್ರಹ ಚಿತ್ರದೊಂದಿಗೆ ಮನೆ ಬಾಗಿಲಿಗೆ: ನಮ್ಮ  ದೇಶದಲ್ಲಿ ಕೃಷಿ ಆದಾಯಕ್ಕೆ ತೆರಿಗೆ ವಿನಾಯ್ತಿ ನೀಡಲಾಗುತ್ತದೆ. ಆದರೆ, ಹೆಚ್ಚಿನ ಸಂದರ್ಭದಲ್ಲಿ
ಜನರು ಇದೇ ವಿನಾಯ್ತಿಯನ್ನು ದುರ್ಬಳಕೆ ಮಾಡಿಕೊಂಡು, ಕಪ್ಪುಹಣವನ್ನು ಬಿಳಿಯನ್ನಾಗಿ ಪರಿವರ್ತಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಕೆಲವು ಭೂಮಾಲೀಕರು ತಮ್ಮ ಜಮೀನನ್ನು ಮಾರಾಟ ಮಾಡುವ ಮೊದಲು ಅದರಲ್ಲಿ ಕೃಷಿ ಮಾಡಲಾಗುತ್ತಿತ್ತು ಎಂದು ಸುಳ್ಳು ಹೇಳಿ, ನಕಲಿ ಪಾವತಿ ಚೀಟಿ ತೋರಿಸಿ ತೆರಿಗೆ ವಿನಾಯ್ತಿ ಪಡೆಯುತ್ತಾರೆ. ಇಂಥವರನ್ನು ಪತ್ತೆ ಹಚ್ಚಲು ಐಟಿ ಇಲಾಖೆ ಅಧಿಕಾರಿಗಳು ಈಗ ಸಖತ್ತಾಗಿರುವ ಪ್ಲ್ರಾನ್‌ ರೆಡಿ ಮಾಡಿಕೊಂಡಿದ್ದಾರೆ. ಇದಕ್ಕೆ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ(ಇಸ್ರೋ) ಕೂಡ ನೆರವು ನೀಡಲಿದೆ. ಅದರಂತೆ, ಅಧಿಕಾರಿಗಳು ಮೊದಲು, ನಿರ್ದಿಷ್ಟ ಅವಧಿಯಲ್ಲಿ ಭೂಮಾಲೀಕನ ಜಮೀನಿನಲ್ಲಿ ನಿಜಕ್ಕೂ ಕೃಷಿ ಮಾಡಲಾಗುತ್ತಿತ್ತೇ ಎಂಬುದನ್ನು ಉಪಗ್ರಹ ಚಿತ್ರದ ಮೂಲಕ ದೃಢಪಡಿಸಿಕೊಳ್ಳುತ್ತಾರೆ. ಈ ಚಿತ್ರವು ನಿಖರ ಮಾಹಿತಿ ನೀಡುವ ಕಾರಣ, ಒಂದು ವೇಳೆ ಅಲ್ಲಿ ಕೃಷಿ ಮಾಡಿಯೇ ಇಲ್ಲ ಎಂಬುದು ಸಾಬೀತಾದರೆ ಸಿರಿವಂತ ಭೂಮಾಲೀಕನ ವಿರುದ್ಧ ಕ್ರಮ ಗ್ಯಾರಂಟಿ. ಅದಕ್ಕಾಗಿ, ಸಂಶಯ  ವಿರುವ ವ್ಯಕ್ತಿಗಳ ಮನೆಗೆ ಐಟಿ ಅಧಿಕಾರಿಗಳು ಉಪಗ್ರಹ ಚಿತ್ರದೊಂದಿಗೇ ಬರಲಿದ್ದಾರೆ.

ಕೃಷಿ ಆದಾಯಕ್ಕೆ ತೆರಿಗೆ?: ಶ್ರೀಮಂತ ರೈತರಿಗೆ ತೆರಿಗೆ ವಿನಾಯ್ತಿ ನೀಡಬಾರದು ಎಂಬ ಕೂಗು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಆದರೆ, ಇದನ್ನು ಜಾರಿ ಮಾಡಬೇಕೆಂದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ರೈತರನ್ನೂ ತೆರಿಗೆ ವ್ಯಾಪ್ತಿಗೆ ತರುವ ಕುರಿತು ನೀತಿ ಆಯೋಗವೂ ಶಿಫಾರಸು ಮಾಡಿದೆ. ಆದರೆ, ಕೃಷಿ ಆದಾಯಕ್ಕೆ ತೆರಿಗೆ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳುವ ಮೂಲಕ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರು ನೀತಿ ಆಯೋಗದ ಸಲಹೆಯನ್ನು ತಿರಸ್ಕರಿಸಿದ್ದರು.

ಆಗಲೇ ಸಿಕ್ಕಿಬಿದ್ದಿರುವ ರೈತ
ವ್ಯಕ್ತಿಯೊಬ್ಬರು ತಮ್ಮ ಕೃಷಿ ಭೂಮಿ ಮಾರಾಟ ಮಾಡಿದ್ದರಿಂದ ಸಿಕ್ಕ ಲಾಭಕ್ಕೆ ತೆರಿಗೆ ವಿನಾಯ್ತಿ ಕೋರಿದ್ದರು. ನಿಯಮದ ಪ್ರಕಾರ, ಮಾರಾಟ ಮಾಡುವ ಕನಿಷ್ಠ 2 ವರ್ಷಗಳ ಮುನ್ನ ಆ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆದಿರಬೇಕು. ಹಾಗಿದ್ದರೆ ಮಾತ್ರ ವಿನಾಯ್ತಿ ನೀಡಲಾಗುತ್ತದೆ. ಆದರೆ, ಈತ ನೀಡಿದ ಮಾಹಿತಿ ಬಗ್ಗೆ ಸಂಶಯ ಬಂದ ಕಾರಣ ಐಟಿ ಅಧಿಕಾರಿಗಳು ನೇರವಾಗಿ ಇಸ್ರೋವನ್ನು ಸಂಪರ್ಕಿಸಿದರು. ಆತನ ಭೂಮಿಯ 3 ವರ್ಷಗಳ ಅವಧಿಯ ಉಪಗ್ರಹ ಚಿತ್ರವನ್ನು ಪಡೆದು  ಕೊಂಡರು. ಆಗ ಗೊತ್ತಾಗಿದ್ದೇ ನೆಂದರೆ, ಆ ಭೂಮಿ ಬರಡಾಗಿದ್ದು, ಅಲ್ಲಿ ಕೃಷಿ ಚಟುವಟಿಕೆ ನಡೆದೇ ಇಲ್ಲ ಎಂದು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.