ಗುಂಡಿಗೂ ಆಧಾರ್ ಕಡ್ಡಾಯ
Team Udayavani, Sep 22, 2017, 11:55 AM IST
ಹೈದರಾಬಾದ್: ಬ್ಯಾಂಕ್ ಖಾತೆ, ಮೊಬೈಲ್, ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡಬೇಕೆನ್ನುವುದು ಕೇಂದ್ರದ ನಿಯಮ. ಆದರೆ, ಇನ್ನು ಪಬ್ಗಳಲ್ಲಿ ಗುಂಡು ಹಾಕಬೇಕಾದರೆ ಕೂಡ ಆಧಾರ್ ಕಾರ್ಡ್ ಕಡ್ಡಾಯ. ಇದು ಕೇಂದ್ರ ಸರಕಾರದ ನಿರ್ಧಾರವಲ್ಲ. ತೆಲಂಗಾಣದ ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ರಾಜಧಾನಿ ಹೈದರಾಬಾದ್ನಲ್ಲಿ ಪಬ್ ಪ್ರವೇಶಕ್ಕೆ ಆಧಾರ್ ಕಡ್ಡಾಯವೆಂದು ಅಲ್ಲಿನ ಅಬಕಾರಿ ಮತ್ತು ಪಾನ ನಿಷೇಧ ಇಲಾಖೆ ಆದೇಶ ಹೊರಡಿಸಿದೆ.
ಇತ್ತೀಚೆಗೆ ಖಾಸಗಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ವೇಳೆ ಆಕೆ ಮತ್ತು ಇತರರು ನಿಯಮಿತವಾಗಿ ಪಬ್ಗ ಹೋಗುತ್ತಿದ್ದುದು ಬೆಳಕಿಗೆ ಬಂದಿದೆ. ಹೀಗಾಗಿ, ಅಪ್ರಾಪ್ತ ವಯಸ್ಸಿನವರು ಪಬ್ಗೆ ಪ್ರವೇಶಿಸದಂತೆ ಮಾಡಲು ಇಂಥ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿ ಉಂಟಾಗಬಹುದಾದ ದುರಂತಗಳ ಸಂಖ್ಯೆ ತಡೆಯುವ ಪ್ರಯತ್ನಕ್ಕೂ ತೆಲಂಗಾಣ ಸರಕಾರ ಮುಂದಾಗಿದೆ. ಇಷ್ಟು ಮಾತ್ರವಲ್ಲದೆ ಪಬ್ ಮತ್ತು ಬಾರ್ ಮಾಲೀಕರು ತಮ್ಮ ಖಾಯಂ ಗ್ರಾಹಕರ ರಿಜಿಸ್ಟರ್ ಅನ್ನು ಕಾಯ್ದುಕೊಳ್ಳಲೂ ಕಟ್ಟಪ್ಪಣೆ ಮಾಡಲಾಗಿದೆ. ಮಾದಕ ವಸ್ತು ಕಳ್ಳಸಾಗಣೆದಾರರ ಮೇಲೆ ನಿಯಂತ್ರಣ ಹೇರಲೂ ಇದು ನೆರವಾಗಲಿದೆ ಎನ್ನುವುದು ತೆಲಂಗಾಣ ಸರಕಾರದ ವಿಶ್ವಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ