ಮುಸ್ಲಿಮರೂ ಗೋ ಸಂರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ್ದಾರೆ: ಭಾಗವತ್
Team Udayavani, Sep 30, 2017, 12:42 PM IST
ನಾಗ್ಪುರ: ‘ಗೋ ಸಂರಕ್ಷಣೆಗಾಗಿ ಮುಸ್ಲಿಮರೂ ಪ್ರಾಣ ಕಳೆದುಕೊಂಡಿದ್ದು , ಗೋ ಸಂರಕ್ಷಣೆಗೆ ನಮ್ಮ ಸಂವಿಧಾನದಲ್ಲೂ ಅವಕಾಶ ಇದೆ’ ಎಂದು ಆರ್ಎಸ್ಸೆಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ.
ಶನಿವಾರ ವಿಜಯದಶಮಿಯ ಆರೆಸ್ಸೆಸ್ ಬೈಠಕ್ ನಲ್ಲಿ ಮಾತನಾಡಿದ ಭಾಗವತ್ ‘ನಮ್ಮ ದೇಶದಲ್ಲಿ ಗೋವುಗಳನ್ನು ಹಾಲಿಗಿಂತ ಹೆಚ್ಚಾಗಿ ಗೋಮೂತ್ರ ಮತ್ತು ಸೆಗಣಿಗಾಗಿ ಸಾಕಲಾಗುತ್ತಿದೆ . ರೈತರು ಗೋವು ಆಧಾರಿತ ಕೃಷಿ ಮಾಡುತ್ತಿದ್ದಾರೆ. ಗೋವು ಧರ್ಮದ ವಿಚಾರವಲ್ಲ. ಎಲ್ಲರೂ ಗೋ ರಕ್ಷಣೆಗೆ ಮುಂದಾಗಬೇಕು. ಗೋವಿನ ರಕ್ಷಣೆಗಾಗಿ ಹಿಂಸಾತ್ಮಕ ಮಾರ್ಗ ಅನುಸರಿಸಬಾರದು’ ಎಂದು ಕರೆ ನೀಡಿದರು.
‘ಅನೇಕ ಮುಸ್ಲಿಮರೂ ಗೋ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಕೆಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ’ ಎಂದು ಭಾಗವತ್ ಹೇಳಿದರು .
‘ಹಲವು ವ್ಯಕ್ತಿಗಳು ಗೋ ಸಂರಕ್ಷರಿಂದ ಹತ್ಯೆಗೀಡಾಗಿದ್ದಾರೆ, ಇದೆ ವೇಳೆ ಗೋ ಕಳ್ಳ ಸಾಗಾಣಿಕೆದಾರರಿಂದ ಹಲವರ ಹತ್ಯೆಯಾಗಿದೆ. ಧರ್ಮವನ್ನು ಮೀರಿ ಗೋವನ್ನು ರಕ್ಷಿಸಬೇಕಾಗಿದೆ’ ಎಂದರು.
‘ರೊಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡುವ ವಿಚಾರದಲ್ಲಿ ರಾಷ್ಟ್ರದ ಭದ್ರತೆಯ ಬಗ್ಗೆ ಮೋದಿ ಸರ್ಕಾರ ಆಲೋಚಿಸಬೇಕು, ಈಗಾಗಲೇ ಬಾಂಗ್ಲಾ ವಲಸಿಗರಿಂದ ನಾವು ಸಮಸ್ಯೆ ಎದುರಿಸುತ್ತಿದ್ದೇವೆ’ ಎಂದರು.
‘ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ದೇಶ ದ್ರೋಹಿಗಳಿಗೆ ನೆರವು ನೀಡುತ್ತಿವೆ’ ಎಂದು ಕಿಡಿ ಕಾರಿದರು.
ಸಮಾರಂಭದಲ್ಲಿ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ, ಮಹಾರಾಷ್ಟ ಸಿಎಂ ದೇವೇಂದ್ರ ಫಡ್ನವೀಸ್ , ಕೇಂದ್ರ ಸಚಿವ ನಿತಿನ್ ಗಡ್ಗರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ