ಕೇರಳಿಗರು RSS ನಿಂದ ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ
Team Udayavani, Oct 2, 2017, 2:45 PM IST
ತಿರುವನಂತಪುರಂ: ಕೇರಳ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದು ,’ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ ಆರ್ಎಸ್ಎಸ್ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ’ ಎಂದು ಕಿಡಿ ಕಾರಿದ್ದಾರೆ.
ಭಾನುವಾರ ಕೇರಳದ ದೆಹಲಿ ಘಟಕದ ಕಾರ್ಯ ನಿರತ ಪತ್ರಕರ್ತರ ಸಂಘದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಜಯನ್ ‘ಆರ್ಎಸ್ಎಸ್ ಧಾರ್ಮಿಕ ಅಲ್ಪಸಂಖ್ಯಾತರನ್ನು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ಪರಿಗಣಿಸಿದೆ’ ಎಂದರು.
‘ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಪ್ರತೀ ಕೇರಳಿಗನಿಗೆ ಹಾಕಿದ ಸವಾಲಾಗಿದೆ’ ಎಂದರು.
‘ದೇಶದ ಪ್ರಸ್ತುತ ಮಾಧ್ಯಮಗಳ ಸ್ಥಿತಿ ಅತ್ತಂತ ಕಳಪೆಯಾಗಿದ್ದು ಮಾಧ್ಯಮಗಳಲ್ಲಿ ತೀವ್ರ ಬಲಪಂಥೀಯ ವಿಚಾರಗಳ ಹೇರಿಕೆಯಾಗಿದೆ ಎಂದು ವರದಿ ಹೇಳುತ್ತದೆ. ಇದು ಅಪಾಯಕಾರಿ’ ಎಂದರು.
‘ಕೇರಳದ ಪತ್ರಕರ್ತರು ರಾಜ್ಯದ ಅನಧಿಕೃತ ರಾಯಭಾರಿಗಳಂತೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ