ಕೇರಳಿಗರು RSS ನಿಂದ ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ
Team Udayavani, Oct 2, 2017, 2:45 PM IST
ತಿರುವನಂತಪುರಂ: ಕೇರಳ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದು ,’ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ ಆರ್ಎಸ್ಎಸ್ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ’ ಎಂದು ಕಿಡಿ ಕಾರಿದ್ದಾರೆ.
ಭಾನುವಾರ ಕೇರಳದ ದೆಹಲಿ ಘಟಕದ ಕಾರ್ಯ ನಿರತ ಪತ್ರಕರ್ತರ ಸಂಘದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಜಯನ್ ‘ಆರ್ಎಸ್ಎಸ್ ಧಾರ್ಮಿಕ ಅಲ್ಪಸಂಖ್ಯಾತರನ್ನು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ಪರಿಗಣಿಸಿದೆ’ ಎಂದರು.
‘ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಪ್ರತೀ ಕೇರಳಿಗನಿಗೆ ಹಾಕಿದ ಸವಾಲಾಗಿದೆ’ ಎಂದರು.
‘ದೇಶದ ಪ್ರಸ್ತುತ ಮಾಧ್ಯಮಗಳ ಸ್ಥಿತಿ ಅತ್ತಂತ ಕಳಪೆಯಾಗಿದ್ದು ಮಾಧ್ಯಮಗಳಲ್ಲಿ ತೀವ್ರ ಬಲಪಂಥೀಯ ವಿಚಾರಗಳ ಹೇರಿಕೆಯಾಗಿದೆ ಎಂದು ವರದಿ ಹೇಳುತ್ತದೆ. ಇದು ಅಪಾಯಕಾರಿ’ ಎಂದರು.
‘ಕೇರಳದ ಪತ್ರಕರ್ತರು ರಾಜ್ಯದ ಅನಧಿಕೃತ ರಾಯಭಾರಿಗಳಂತೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ