ಗುಜರಾತ್‌ನಲ್ಲೊಬ್ಬ ಅಪೂರ್ವ ಗೋವು ಪ್ರೇಮಿ 


Team Udayavani, Oct 20, 2017, 10:55 AM IST

10-a.jpg

ಅಹ್ಮದಾಬಾದ್‌: “ನಾನೊಬ್ಬ, ಜತೆಗಿರುವ ಸಾವಿರಾರು ಪ್ರಾಣಿಗಳೇ ನನ್ನ ಕುಟುಂಬ ಸದಸ್ಯರು. ದಿನದ 24 ಗಂಟೆಗಳನ್ನೂ ಅದರೊಟ್ಟಿಗೇ ಕಳೆಯೋದು. ಅದುವೇ ನನ್ನ ಪಾಲಿನ ಸ್ವರ್ಗ’ ಇಂಥದ್ದೊಂದು ಬದುಕು ಸಾಗಿಸೋದು ಕಷ್ಟಸಾಧ್ಯ. ಆದರೆ ಇಲ್ಲಿದ್ದಾರೆ ನೋಡಿ, ಸದಾಕಾಲ ಗೋವುಗಳ ಜತೆಯಲ್ಲೆ ಊಟ, ತಿಂಡಿ, ಮಾತುಕತೆ, ಹರಟೆಯಲ್ಲಿ ತೊಡಗಿರುವ ವ್ಯಕ್ತಿ.

ಇದು ಗುಜರಾತ್‌ನ ಅಹ್ಮದಾಬಾದ್‌ ನಿವಾಸಿ 44ರ ಹರೆಯದ ವಿಜಯ್‌ ಪ್ರಸನ್ನ ಅವರ ಅಪರೂಪದ ದಿನಚರಿ. ಅಚ್ಚರಿ ವ್ಯಕ್ತವಾಗಲಿಕ್ಕೆ ಸಂಗತಿಗಳು ಇವಿಷ್ಟೇ ಅಲ್ಲ, ನಂಬಲಿಕ್ಕೂ ಅಸಾಧ್ಯವೆನಿಸುವ ಸತ್ಯಗಳು ಇನ್ನೂ ಇವೆ. ಗೋಮೂತ್ರ ಸೇವಿಸಿ 22 ದಿನಗಳನ್ನೇ ಕಳೆದಿರುವ ವಿಜಯ್‌ ಪ್ರಸನ್ನ ಅವರು, ಗೋಮಯದ ಪದಾರ್ಥಗಳನ್ನೆ ಆಹಾರವಾಗಿಸಿಕೊಂಡಿದ್ದಾರೆ. ಹಟ್ಟಿಯಲ್ಲಿರುವ ಹಸುಗಳಿಗೂ ಸ್ನಾನ ಮಾಡಿಸುತ್ತಲೇ ತಾವೂ ಸ್ನಾನ ಮುಗಿಸುತ್ತಾರೆ. ಟಿವಿಗಳನ್ನೂ ಗೋವುಗಳ ಜತೆಯಲ್ಲೇ ಕುಳಿತು ವೀಕ್ಷಿಸುತ್ತಾರೆ. ವಾಯುವಿಹಾರಕ್ಕೆ ಹೋಗುವಾಗಲೂ ಜತೆಗೆ ಒಂದೆರಡು ಗೋವುಗಳು ಸಾಥ್‌ ನೀಡುತ್ತವೆ. ರಾತ್ರಿ ಮಲಗುವಾಗಲೂ ಮಗ್ಗುಲಲ್ಲಿ ಮುದ್ದು ಮುದ್ದಾದ ಹಸುಕಂದಮ್ಮ ಎರಡು ತಿಂಗಳ “ಸರಸ್ವತಿ’ಯನ್ನು ಮಲಗಿಸಿಕೊಳ್ಳುತ್ತಾರೆ. ಒಟ್ಟಾರೆ ಗೋವುಗಳಿಲ್ಲದೇ ವಿಜಯ್‌ ಪ್ರಸನ್ನ ಇಲ್ಲ, ಎನ್ನುವಷ್ಟರ ಮಟ್ಟಿಗೆ ಜೀವನವನ್ನೇ ಅರ್ಪಿಸಿಕೊಂಡಿದ್ದಾರೆ.

ಅಹ್ಮದಾಬಾದ್‌ನಿಂದ ಅಂದಾಜು 4 ಮೈಲು ದೂರದಲ್ಲಿರುವ ಇವರು, ಕಳೆದ ವರ್ಷವಷ್ಟೇ ಅಂದಾಜು 18 ಲಕ್ಷ ರೂ. ಖರ್ಚು ಮಾಡಿ ತಮ್ಮ ಬಳಿ ಇರುವ ಪೂನಂ ಹೆಸರಿನ ಗೋವಿಗೆ ಮದುವೆ ಕೂಡ ಮಾಡಿಸಿದ್ದರು. ಮದುವೆ ಹೆಚ್ಚು ಕಡಿಮೆ 5,000 ಅತಿಥಿಗಳ ಸಮ್ಮುಖದಲ್ಲಿ ನಡೆಸಿದ್ದಾರೆ. ಪ್ರಸನ್ನ ಅವರ ಕುಟುಂಬದಲ್ಲಿ ಕೇವಲ ಹಸುಗಳಷ್ಟೇ ಅಲ್ಲ, 2 ಗೂಳಿ, 6 ನಾಯಿಗಳು ಸಹಿತ ಬರೋಬ್ಬರಿ 2,000 ಬೇರೆ ಬೇರೆ ಜಾತಿಯ ಪ್ರಾಣಿಗಳಿವೆ. ಗೋಶಾಲೆ ಪ್ರದೇಶದಲ್ಲಿ ನವಿಲು, ಇಲಿಗಳು, ಪಕ್ಷಿಗಳು, ಹಾವುಗಳೂ ಪ್ರಸನ್ನ ಅವರ ಪ್ರೀತಿಗೆ ಮನಸೋತು ಬದುಕು ಸಾಗಿಸುತ್ತಿವೆ.

ಹಸುಗಳೇ ಸರ್ವಸ್ವ, ಪಂಚಪ್ರಾಣ
ನನ್ನ ಮತ್ತು ಹಸುಗಳ ನಡುವಿನ ಪ್ರೀತಿ, ವಾತ್ಸಲ್ಯ, ಬಾಂಧವ್ಯ ವರ್ಣಿಸಲಿಕ್ಕೆ ಪದಗಳೇ ಇಲ್ಲ. ಬೇರೆ ಯಾರಿಂದಲೂ ಆ ಬಗ್ಗೆ ಮಾತನಾಡಲೂ ಸಾಧ್ಯವಿಲ್ಲ. ಅವುಗಳೊಂ ದಿಗಿರುವುದೇ ನನ್ನ ಸ್ವರ್ಗ. ನನ್ನ ಪಾಲಿಗೆ ಬೇರೆ ಜಗತ್ತೇ ಇಲ್ಲ. ನನ್ನ ಕಷ್ಟ-ಸುಖಗಳೆಲ್ಲವನ್ನೂ ಅವುಗಳೊಂದಿಗೆ ಹಂಚಿಕೊಳ್ಳುತ್ತೇನೆ. ಅದರಲ್ಲೂ ರಾಧಾ, ಪೂನಮ್‌, ಸರಸ್ವತಿ ನನ್ನ ಹೃದಯದಲ್ಲೇ ಮನೆ ಮಾಡಿಕೊಂಡಿವೆ. ಹಸುಗಳಿಂದಲೇ ನನ್ನ ಜೀವನ ಶೈಲಿಯೇ ಇಂದು ಬದಲಾಗಿದೆ.  ಆರಂಭದ ದಿನದಲ್ಲಿ ನನ್ನ ಮಡದಿ, ಮಕ್ಕಳು ಸಂಕೋಚ ಪಟ್ಟಿ ದ್ದರು. ಅವರಿಂದ ದೂರವಾಗಿ ಗೋವುಗಳೊಂದಿಗೂ ಬದುಕಿದ್ದೆ. ಆದರೀಗ ಅವರೂ ನನ್ನನ್ನು ಅರ್ಥಮಾಡಿಕೊಂಡು ಜತೆಗೇ ಜೀವಿಸುತ್ತಿದ್ದಾರೆ ಎನ್ನುತ್ತಾರೆ ವಿಜಯ್‌ ಪ್ರಸನ್ನ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.