ಮಧ್ಯಪ್ರದೇಶದ 16 ಲಕ್ಷ ರೈತರಿಗೆ ಭಾವಾಂತರ್ ಯೋಜನೆ ಲಾಭ
Team Udayavani, Oct 25, 2017, 3:44 PM IST
ಭೋಪಾಲ್ : ರೈತರ ಉತ್ಪನ್ನಗಳಿಗೆ ಮಾದರಿ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುವ ಮಧ್ಯಪ್ರದೇಶದ “ಭಾವಾಂತರ್’ ಯೋಜನೆ’ಯ ಲಾಭವನ್ನು ಮಧ್ಯಪ್ರದೇಶದ 16 ಲಕ್ಷಕ್ಕೂ ಅಧಿಕ ರೈತರು ಪಡೆಯಲಿದ್ದಾರೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ರೈತರ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆಯನ್ನು ನಿಗದಿಸಿ ಆ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮಧ್ಯಪ್ರದೇಶ ಸರಕಾರದ ಯೋಜನೆಗೆ “ಭಾವಾಂತರ್’ ಎಂದು ಹೆಸರಿಡಲಾಗಿದೆ.
ಈ ಯೋಜನೆಯಡಿ ಸರಕಾರ ನಿಗದಿಸುವ ಮಾರುಕಟ್ಟೆ ಧಾರಣೆ ಮತ್ತು ಕನಿಷ್ಠ ಬೆಂಬಲ ಬೆಲೆ ನಡುವಿನ ಅಂತರವನ್ನು “ಮಾದರಿ ಬೆಲೆ’ ಎಂದು ಕರೆಯಲಾಗುತ್ತದೆ. ಇದನ್ನು ಸರಕಾರವು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತದೆ.
ಹದಿನಾರು ಲಕ್ಷಕ್ಕೂ ಅಧಿಕ ರೈತರು ಈಗಾಗಲೇ ಈ “ಭಾವಾಂತರ್’ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಈ ವಿಶಿಷ್ಟ ಯೋಜನೆಯನ್ನು ಮಧ್ಯಪ್ರದೇಶ ಸರಕಾರ ಜಾರಿ ಮಾಡುತ್ತಿದೆ.
ಡಿ.31ರಂದು ಸ್ಥಳೀಯ ಮಾರುಕಟ್ಟೆಗಳಲ್ಲಿ (ಮಂಡಿಗಳಲ್ಲಿ) ಮಾರಾಟ ಕಿಂಡಿ ಮುಚ್ಚಲ್ಪಟ್ಟಾಗ ಸರಕಾರ ಅಂದೇ ಮಾದರಿ ಬೆಲೆಯನ್ನು ಘೋಷಿಸುತ್ತದೆ ಎಂದು ಅಧಿಕಾರಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?