ಭಾರತ ಮೊದಲು ಹಿಂದೂಗಳ ರಾಷ್ಟ್ರ,ಅನಂತರ ಇತರರದ್ದು


Team Udayavani, Oct 31, 2017, 12:00 PM IST

4.jpg

ಮುಂಬಯಿ: ಭಾರತ ಮೊದಲು ಹಿಂದೂಗಳ ರಾಷ್ಟ್ರವಾಗಿದ್ದು, ಅನಂತರ ಇತರ ಧರ್ಮದವರಿಗೆ ಸೇರಿರುವುದಾಗಿದೆ ಎಂದು ಸೋಮವಾರ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಪ್ರತಿಪಾದಿಸಿದೆ.

ಕೇಂದ್ರದಲ್ಲಿ ಹಿಂದುತ್ವಪರ ಸರಕಾರವಿದ್ದರೂ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಸ್ಥಳಾಂತರಿತ ಕಾಶ್ಮೀರ ಪಂಡಿತರ ಘರ್‌ ವಾಪಸಿಯಂತಹ ಸಮಸ್ಯೆಗಳು ಇನ್ನೂ ಬಗೆಹರೆಯದಿರುವುದಕ್ಕೂ ಪಕ್ಷವು ವಿಷಾದ ವ್ಯಕ್ತಪಡಿಸಿದೆ.

ಹಿಂದೂಸ್ಥಾನ ಹಿಂದೂಗಳ ರಾಷ್ಟ್ರವಾಗಿದೆ. ಅಂದರೆ ದೇಶವು ಬೇರೆಯವರಿಗೆ ಸೇರಿದ್ದಲ್ಲ ಎಂಬುದು ಅದರರ್ಥವಲ್ಲ ಎಂದು  ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಶುಕ್ರವಾರ ಇಂದೋರ್‌ನಲ್ಲಿ ಹೇಳಿಕೆ ನೀಡಿದ್ದರು. ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌ ಅವರು ಭಾರತವು ಹಿಂದೂಗಳ ಜತೆಗೆ ಇತರರಿಗೂ ಸೇರಿದೆ ಎಂಬಂತೆ ಮಾತನಾಡುತ್ತಿದ್ದಾರೆ. ಆದರೆ, ಭಾರತವು ಮೊದಲು ಹಿಂದೂಗಳಿಗೆ ಸೇರಿದ್ದು,ಅನಂತರ ಇತರರಿಗೆ ಸ್ಥಾನ ಎಂಬುದು ಶಿವಸೇನೆ ಮುಖ್ಯಸ್ಥರ ಅಭಿಪ್ರಾಯವಾಗಿದೆ. ಯಾಕೆಂದರೆ, ಮುಸ್ಲಿಮರಿಗೆ 50ಕ್ಕೂ ಅಧಿಕ ರಾಷ್ಟ್ರಗಳಿವೆ. ಆದರೆ, ಹಿಂದೂಗಳಿಗೆ ಇರುವುದು ಕೇವಲ ಒಂದೇ ರಾಷ್ಟ್ರ, ಅದು ಭಾರತ ಎಂದು ಸೋಮವಾರ ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ.

ಕ್ರಿಶ್ಚಿಯನ್ನರು ಅಮೆರಿಕ ಮತ್ತು ಯೂರೋಪ್‌ನಂತಹ ರಾಷ್ಟ್ರಗಳನ್ನು ಹೊಂದಿದ್ದಾರೆ, ಬೌದ್ಧರಿಗಾಗಿ ಚೀನಾ, ಜಪಾನ್‌, ಶ್ರೀಲಂಕಾ ಮತ್ತು ಮ್ಯಾನ್ಮಾರ್‌ನಂತಹ ರಾಷ್ಟ್ರಗಳಿವೆ. ಆದರೆ, ಹಿಂದೂಗಳಿಗೆ ಭಾರತವೊಂದನ್ನು ಬಿಟ್ಟು ಬೇರೆ ಯಾವುದೇ ರಾಷ್ಟ್ರವಿಲ್ಲ ಎಂದು ಶಿವಸೇನೆ ನುಡಿದಿದೆ.

ಹಿಂದೂ ರಾಷ್ಟ್ರದಲ್ಲಿ ಇತರ ಧರ್ಮಗಳ ಜನರು ಹಿಂದೂಸ್ಥಾನಿ ನಾಗರಿಕರಂತೆ ನೆಲೆಸಬಹುದಾಗಿದೆ. ಆದರೆ, ಅವರು ತಮ್ಮ ತಮ್ಮ ಧರ್ಮವನ್ನು ರಕ್ಷಿಸುವ ಜತೆಗೆ ಹಿಂದೂ ರಾಷ್ಟ್ರದ ಪರವೂ ನಿಷ್ಠೆ ಯನ್ನು ಹೊಂದಿರಬೇಕಾಗುತ್ತದೆ ಎಂದು ಕೇಸರಿ ಪಕ್ಷ ತಿಳಿಸಿದೆ.

ಭಾರತದಲ್ಲಿ ಇಂದು ಹಿಂದುತ್ವಪರ ಬಹುಮತದ ಸರಕಾರವಿದ್ದರೂ, ಅದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಆಸಕ್ತಿ ತೋರಿಸುತ್ತಿಲ್ಲ. ಸರಕಾರವು ವಿವಾದವನ್ನು ಸ್ವತಃ ಬಗೆಹರಿಸುವ ಬದಲಿಗೆ ಅದನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದೆ ಎಂದು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ವಿರುವ ಹೊರತಾಗಿಯೂ ಇಂದು ಸಾರ್ವಜನಿಕ ಸ್ಥಳದಲ್ಲಿ ವಂದೇ ಮಾತರಂ ಹಾಡಲು ಅನು ಮತಿಯಿಲ್ಲದಂತಾಗಿದೆ. ಈ ಸಂಬಂಧ ಆರ್‌ಎಸ್‌ಎಸ್‌ ಸರಕಾರಕ್ಕೆ ನಿರ್ದೇಶನ ನೀಡಬೇಕಾದ ಆವ ಶ್ಯಕತೆಯಿದೆ ಎಂದು ಶಿವಸೇನೆ ಸಲಹೆ ನೀಡಿದೆ.

ಯಾವ ಓರ್ವ ನಾಯಕ ಅಥವಾ ಪಕ್ಷಕ್ಕೆ ಈ ದೇಶವನ್ನು ಮಹಾನ್‌ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ನಮಗೆ ಮೊದಲು ಉತ್ತಮ ಸಮಾಜವೊಂದನ್ನು ನಿರ್ಮಾಣ ಮಾಡುವ ಆವಶ್ಯಕತೆಯಿದೆ ಎಂಬ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನೂ ನಾವು ಕಡೆಗಣಿಸುವಂತ್ತಿಲ್ಲ ಎಂದೂ ಪಕ್ಷವು ಸಂಪಾದಕೀಯದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.