ಫೆಬ್ರುವರಿ 6ರೊಳಗೆ ಮೊಬೈಲ್, ಆಧಾರ್ ಲಿಂಕ್ ಮಾಡಿಸಿ; ಕೇಂದ್ರ ಗಡುವು
Team Udayavani, Nov 3, 2017, 11:56 AM IST
ನವದೆಹಲಿ: ಎಲ್ಲಾ ಗ್ರಾಹಕರು ಇ-ಕೆವೈಸಿ ವೆರಿಫಿಕೇಶನ್ ಅಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಫೆಬ್ರುವರಿ 6ರೊಳಗೆ ಆಧಾರ್ ಜತೆ ಲಿಂಕ್ ಮಾಡಿಸಬೇಕು ಹಾಗೂ ಹೊಸ ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯ ಎಂಬುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ 113 ಪುಟಗಳ ಹೊಸ ಅಫಿಡವಿಟ್ ಅನ್ನು ವಕೀಲ ಝೋಹೆಬ್ ಹೊಸೈನ್ ಅವರ ಮೂಲಕ ಸಲ್ಲಿಸಿದೆ. ಆಧಾರ್ ಗೆ ಮೊಬೈಲ್ ನಂಬರ್ ಅನ್ನು ಲಿಂಗ್ ಮಾಡುವ ಗಡುವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಆದರೆ ಬಾಕಿ ಉಳಿದಿರುವ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಿರುವುದಾಗಿ ಹೇಳಿದೆ.
ಆಧಾರ್ ಜತೆ ಮೊಬೈಲ್ ಸಂಖ್ಯೆಯನ್ನು ಜೋಡಿಸುವ ನಿರ್ಧಾರವನ್ನು ಪ್ರಶ್ನಿಸಿ ಹಲವು ಪ್ರತ್ಯೇಕ ಅರ್ಜಿಗಳು ಸುಪ್ರೀಂಕೋರ್ಟ್ ನಲ್ಲಿ ದಾಖಲಾಗಿದ್ದವು, ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ, ನಾಲ್ಕು ವಾರಗಳ ಒಳಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ಆಧಾರ್ ಕಡ್ಡಾಯ ಮಾಡೋದು ನಾಗರಿಕರ ಖಾಸಗಿ ಹಕ್ಕುಗಳ ಉಲ್ಲಂಘನೆ ಎಂಬ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ದಾಖಲಾದ ದೂರುಗಳ ಅರ್ಜಿಯನ್ನು ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ