ಎನ್ನಾರೈ, ಪಿಐಒಗಳಿಗೆ ಆಧಾರ್ ಲಿಂಕ್ ಬೇಕಿಲ್ಲ
Team Udayavani, Nov 18, 2017, 8:34 AM IST
ಹೊಸದಿಲ್ಲಿ: ಅನಿವಾಸಿ ಭಾರತೀಯರು (ಎನ್ಆರ್ಐ), ಭಾರತೀಯ ಮೂಲದ ವ್ಯಕ್ತಿಗಳು (ಪಿಐಒ) ಬ್ಯಾಂಕ್ ಖಾತೆಗಳಿಗೆ ಮತ್ತು ಪ್ಯಾನ್ ಕಾರ್ಡ್ಗೆ ಆಧಾರ್ ಅನ್ನು ಲಿಂಕ್ ಮಾಡಬೇಕಾಗಿಲ್ಲ. ಜತೆಗೆ ಇತರ ಸೇವೆಗಳಿಗೆ ಕೂಡ ಆಧಾರ್ ಅನ್ನು ಸೇರ್ಪಡೆಗೊಳಿಸಬೇಕಾಗಿಲ್ಲ. ಹೀಗೆಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಶುಕ್ರವಾರ ಹೇಳಿದೆ. ಆದರೆ ಇಂಥ ವ್ಯಕ್ತಿಗಳನ್ನು ಗುರುತಿಸಲು ಬೇರೆಯೇ ದಾರಿ ಕಂಡುಕೊಳ್ಳುವ ಬಗೆಯನ್ನು ಹುಡುಕಿ ಕೊಳ್ಳುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದೆ.
ಹಣಕಾಸು ಅಕ್ರಮ ಕಾಯ್ದೆ 2017 ಮತ್ತು ಆದಾಯ ತೆರಿಗೆ ಕಾಯ್ದೆಯಲ್ಲಿ ಉಲ್ಲೇಖೀಸಿರುವಂತೆ ಆಧಾರ್ಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹತೆ ಇರುವವರು ಲಿಂಕ್ ಮಾಡಿಸಿಕೊಳ್ಳಬೇಕು ಎಂದಿದೆ. ಜತೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಆಧಾರ್ ಕಾಯ್ದೆಯಲ್ಲಿ ಹೇಳಲಾಗಿರುವಂತೆ ಎನ್ಆರ್ಐ, ಪಿಐಒ, ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಆಧಾರ್ ನೋಂದಣಿ ಮಾಡಿಸಲು ಅರ್ಹತೆ ಪಡೆದಿಲ್ಲ.
ಅರ್ಜಿ ಸಲ್ಲಿಕೆ ಏಕೆ?: ಮತ್ತೂಂದೆಡೆ ಪ್ಯಾನ್ಕಾರ್ಡ್ ಮತ್ತು ರಿಟರ್ನ್ಸ್ ಫೈಲ್ ವೇಳೆ ಆಧಾರ್ ಲಿಂಕ್ ಮಾಡುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗೆ ಸುಪ್ರೀಂಕೋರ್ಟ್ ಆಕ್ಷೇಪ ಮಾಡಿದೆ. ಆಧಾರ್ ಬಗ್ಗೆ ಇನ್ನೂ ತೀರ್ಪು ಪ್ರಕಟವಾಗಿಲ್ಲ. ಖಾಸಗಿತನದ ಬಗ್ಗೆ ಮಾತ್ರ ತೀರ್ಪು ನೀಡಲಾಗಿದೆ. ಹೀಗಾಗಿ ಯಾವ ಕಾರಣದಿಂದ ಅರ್ಜಿ ಸಲ್ಲಿಕೆಯಾಗಿದೆ ಎಂದು ನ್ಯಾ| ಎ.ಕೆ. ಸಿಕ್ರಿ ಮತ್ತು ನ್ಯಾ| ಅಶೋಕ್ ಭಾನ್ ಅವರನ್ನೊಳಗೊಂಡ ಪೀಠ ಪ್ರಶ್ನಿಸಿದೆ. ಅ ನಂತರ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್