“ಪದ್ಮಾವತಿ’ ವಿರುದ್ಧದ ಅರ್ಜಿ ವಜಾ


Team Udayavani, Nov 21, 2017, 6:05 AM IST

padmavati.jpg

ಹೊಸದಿಲ್ಲಿ: ಅಂಶಗಳನ್ನು ಡಿಲೀಟ್‌ ಮಾಡುವಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾ ಮಾಡಿದೆ.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ, “ಸಿನಿಮಾಗೆ ಇನ್ನೂ ಸಿಬಿಎಫ್ಸಿ ಪ್ರಮಾಣಪತ್ರವೇ ಸಿಕ್ಕಿಲ್ಲ. ಹೀಗಾಗಿ, ಈಗಲೇ ಅಂಥ ಆದೇಶ ನೀಡುವುದಕ್ಕೆ ಬರುವುದಿಲ್ಲ. ಸಿನೆಮಾದ ವಿಚಾರದಲ್ಲಿ ಸೆನ್ಸಾರ್‌ ಮಂಡಳಿಗೆ ತನ್ನದೇ ಆದ ಪಾತ್ರವಿದೆ. ಅವರ ಕರ್ತವ್ಯವನ್ನು ಅವರು ಮಾಡುತ್ತಾರೆ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತು. ಅಷ್ಟೇ ಅಲ್ಲದೆ, ಅರ್ಜಿಯಲ್ಲಿ ಉಲ್ಲೇಖವಾಗಿದ್ದ ಕೆಲವು ಸಾಲುಗಳನ್ನು ಕೂಡ ತೆಗೆದುಹಾಕಿದ ನ್ಯಾಯಪೀಠ, “ಕೋರ್ಟ್‌ಗೆ ಸಲ್ಲಿಸುವ ಮನವಿಗಳು ಸಮಾಜದ ಸ್ವಾಸ್ಥ್ಯ ಹಾಳುಮಾಡುವಂತಿರಬಾರದು,’ ಎಂದು ಅರ್ಜಿದಾರ, ವಕೀಲ ಎಂ.ಎಲ್‌.ಶರ್ಮಾ ಅವರಿಗೆ ಖಡಕ್ಕಾಗಿ ಸೂಚನೆ ನೀಡಿತು.

ಇದೇ ವೇಳೆ, ನಟಿ ದೀಪಿಕಾ ಪಡುಕೋಣೆ ಅವರ ತಲೆ ಕತ್ತರಿಸಿದವರಿಗೆ 10 ಕೋಟಿ ರೂ. ಬಹುಮಾನ ಘೋಷಿಸಿದ ಬಿಜೆಪಿ ನಾಯಕ ಸೂರಜ್‌ ಪಾಲ್‌ ಅಮು ಅವರಿಗೆ ಹರಿಯಾಣ ಬಿಜೆಪಿ ಸೋಮವಾರ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ತಮ್ಮ ಹೇಳಿಕೆ ಕುರಿತು ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಸಿನಿಮಾಗೆ ನಿಷೇಧ: ಸಿಎಂ ಚೌಹಾಣ್‌
ಸಿನಿಮಾದಲ್ಲಿ ಐತಿಹಾಸಿಕ ಸತ್ಯಗಳನ್ನು ತಿರುಚಲಾಗಿದೆ ಎಂದಾದರೆ ನಮ್ಮ ರಾಜ್ಯದಲ್ಲಿ ಪದ್ಮಾವತಿಯ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಘೋಷಿಸಿದ್ದಾರೆ. ಇತಿಹಾಸವನ್ನು ತಿರುಚುವಂಥ ಯಾವುದೇ ಪ್ರಯತ್ನವನ್ನೂ ನಾವು ಸಹಿಸುವುದಿಲ್ಲ. ರಾಣಿ ಪದ್ಮಾವತಿಯ ಘನತೆಗೆ ಧಕ್ಕೆ ತರುವಂಥ ದೃಶ್ಯ ಆ ಸಿನಿಮಾದಲ್ಲಿದ್ದರೆ ಅದಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶವಿಲ್ಲ ಎಂದಿದ್ದಾರೆ ಚೌಹಾಣ್‌. ಇದೇ ವೇಳೆ, ಪಂಜಾಬ್‌ ಸಿಎಂ ಕ್ಯಾ| ಅಮರೀಂದರ್‌ ಸಿಂಗ್‌ ಅವರೂ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಇತಿಹಾಸದ ತಿರುಚುವಿಕೆಯನ್ನು ಯಾರೂ ಒಪ್ಪಲಾರರು. ಸಿನಿಮಾಗೆ ಲೈಸೆನ್ಸ್‌ ಕೊಡುವುದು ಸತ್ಯವನ್ನು ತಿರುಚುವುದಕ್ಕಲ್ಲ ಎಂದಿದ್ದಾರೆ.

ಟ್ರೇಲರ್‌ ಪ್ರಸಾರ ಮಾಡಿದ್ದಕ್ಕೆ ದಾಂಧಲೆ
ಮಧ್ಯಪ್ರದೇಶದ ಥಿಯೇಟರ್‌ವೊಂದರಲ್ಲಿ ಚಲನಚಿತ್ರ ಪ್ರದರ್ಶನದ ಮಧ್ಯೆ ವಿವಾದಿತ ಪದ್ಮಾವತಿ ಸಿನೆಮಾದ ಟ್ರೇಲರ್‌ ಪ್ರಸಾರ ಮಾಡಿದ್ದಕ್ಕೆ ಕರ್ಣಿ ಸೇನಾ ಸದಸ್ಯರು ದಾಂಧಲೆ ಎಬ್ಬಿಸಿದ ಘಟನೆ ನಡೆದಿದೆ. ಜತೆಗೆ, ಮುಂದೆ ಯಾವತ್ತೂ ಸಿನಿಮಾದ ಟ್ರೇಲರ್‌ ಪ್ರಸಾರ ಮಾಡದಂತೆ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. 

ಕೆಲವೊಮ್ಮೆ ಪದ್ಮಾವತಿಯಂಥ ಸಿನಿಮಾಗಳು ಸಂಕಷ್ಟಕ್ಕೆ ಒಳಗಾಗುವುದಿದೆ. ನಾನಂತೂ ಎಲ್ಲವೂ ಸರಿಯಾಗಲಿದೆ ಎಂಬ ಸಕಾರಾತ್ಮಕ ಭಾವನೆ ಹೊಂದಿದ್ದೇನೆ. ಸಿಟ್ಟಾಗುವ, ತಾಳ್ಮೆ ಕಳೆದುಕೊಳ್ಳುವ ಸಮಯ ಇದಲ್ಲ.
– ಶಾಹಿದ್‌ ಕಪೂರ್‌, ಪದ್ಮಾವತಿ ಸಿನಿಮಾದ ನಟ

ಪದ್ಮಾವತಿ ಸಿನಿಮಾ ಕುರಿತ ವಿವಾದವನ್ನು ನಾವು ಮಾತುಕತೆಯ ಮೂಲಕ ಪರಿಹರಿಸಲು ಯತ್ನಿಸುತ್ತಿದ್ದೇವೆಯೇ ಹೊರತು ವಾದ-ಪ್ರತಿ ವಾದದಿಂದ ಅಲ್ಲ.
– ಪ್ರಸೂನ್‌ ಜೋಶಿ, ಸಿಬಿಎಫ್ಸಿ ಮುಖ್ಯಸ್ಥ

ಪದ್ಮಾವತಿ ವಿರುದ್ಧದ ಪ್ರತಿಭಟನೆಗಳೆಲ್ಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡಲು ರಾಜಕೀಯ ಪಕ್ಷವೊಂದು ನಡೆಸಿರುವ ವ್ಯವಸ್ಥಿತ ಸಂಚು.
– ಮಮತಾ ಬ್ಯಾನರ್ಜಿ, ಪ.ಬಂಗಾಲ ಸಿಎಂ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.