ಅಧಿವೇಶನ ವಿಳಂಬ ವಾಕ್ಸಮರ ಪ್ರಾರಂಭ


Team Udayavani, Nov 22, 2017, 6:15 AM IST

samsat.jpg

ಹೊಸದಿಲ್ಲಿ: ಸಂಸತ್‌ನ ಚಳಿಗಾಲದ ಅಧಿವೇಶನದ ವಿಚಾರ ಇದೀಗ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಉದ್ದೇಶಪೂರ್ವಕವಾಗಿಯೇ ಅಧಿವೇಶನ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದರೆ, ಯುಪಿಎ ಅವಧಿಯಲ್ಲೂ ವಿಳಂಬ ಮಾಡಲಾಗಿತ್ತು ಎಂದು ಸರಕಾರ ಸಮರ್ಥಿಸಿಕೊಂಡಿದೆ. ಒಟ್ಟಿನಲ್ಲಿ ಅಧಿವೇಶನ ವಿಚಾರವು ಎರಡೂ ಪಕ್ಷಗಳ ನಾಯಕರ ಕೆಸರೆರಚಾಟಕ್ಕೆ ನಾಂದಿ ಹಾಡಿದೆ.

ಮಂಗಳವಾರ ಈ ಕುರಿತು ಮಾತನಾಡಿರುವ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. “ಬಿಜೆಪಿಯ ಬಣ್ಣ ಎಲ್ಲಿ ಹೊರಬೀಳುತ್ತದೋ ಎಂಬ ಭಯದಿಂದ ಅವರು ಅಧಿವೇಶನ ವಿಳಂಬ ಮಾಡುತ್ತಿದ್ದಾರೆ. ಜಿಎಸ್‌ಟಿ, ನೋಟು ಅಮಾನ್ಯ, ರಫೇಲ್‌ ಡೀಲ್‌, ಸಚಿವರ ಹಗರಣಗಳ ಕುರಿತು ಪ್ರತಿಪಕ್ಷಗಳು ಪ್ರಶ್ನಿಸಿದರೆ ಎಂಬ ಭೀತಿ ಬಿಜೆಪಿಯನ್ನು ಕಾಡುತ್ತಿದೆ. ಮೋದಿ ಸರಕಾರದಲ್ಲಿ ಪ್ರಜಾಪ್ರಭುತ್ವ ಎನ್ನುವುದು ಅತ್ಯಂತ ದೊಡ್ಡ ಹೊಡೆತ ತಿನ್ನುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್‌, “ಸರಕಾರವು ತನ್ನ ಭ್ರಷ್ಟಾಚಾರ ಮತ್ತು ವೈಫ‌ಲ್ಯಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಅಧಿವೇಶನದಿಂದ ದೂರವುಳಿಯಲು ಯತ್ನಿ ಸುತ್ತಿದೆ. 
ಮೋದಿ ಹಾಗೂ ಅವರ ಸಂಪುಟವು ಪ್ರಚಾರದಲ್ಲೇ ನಿರತವಾಗಿದ್ದು, “ಪ್ರಚಾರದ ಯಂತ್ರ’ವಾಗಿ ಮಾರ್ಪಾಟಾಗಿದೆ. ಇದರ ಬದಲಿಗೆ ಒಳ್ಳೆಯ ಆಡಳಿತ ನೀಡುವತ್ತ ಗಮನ ಹರಿಸಬೇಕೆಂದು ಜನ ಬಯಸುತ್ತಾರೆ’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ “ಬ್ರಹ್ಮ’ ಇದ್ದಂತೆ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಸೃಷ್ಟಿಕರ್ತ “ಬ್ರಹ್ಮ’ ಇದ್ದಂತೆ. ಎಲ್ಲವನ್ನೂ ನಿಯಂತ್ರಿಸುತ್ತಿರುವವರು ಅವರೇ. ಚಳಿಗಾಲದ ಅಧಿವೇಶನ ಯಾವಾಗ ನಡೆಸಬೇಕು ಎಂಬುದು ಗೊತ್ತಿರುವುದೂ ಅವರಿಗೆ ಮಾತ್ರ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. “ನಾನು ಹಲವು ಸಚಿವರು, ಸ್ಪೀಕರ್‌, ಲೋಕಸಭೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರಲ್ಲಿ ವಿಚಾರಿಸಿ ನೋಡಿದೆ. ಆದರೆ, ಅಧಿವೇಶನದ ದಿನಾಂಕದ ಬಗ್ಗೆ ಯಾರಿಗೂ ಗೊತ್ತಿಲ್ಲ. ಇದು ಗೊತ್ತಿರುವುದು ಒಬ್ಬ ವ್ಯಕ್ತಿಗೆ ಮಾತ್ರ. ಆ ವ್ಯಕ್ತಿಯನ್ನು ಅವರು ಬ್ರಹ್ಮ ಎನ್ನುತ್ತಾರೆ. ಹಾಗಾಗಿ, ಬ್ರಹ್ಮ ಆದೇಶ ಹೊರಡಿಸುವವರೆಗೂ ನಮಗೆ ಅಧಿವೇಶನದ ದಿನಾಂಕ ಗೊತ್ತಾಗುವುದಿಲ್ಲ’ ಎನ್ನುತ್ತಾ ಆಡಳಿತಾರೂಢ ಪಕ್ಷವನ್ನು ಕುಟುಕಿದ್ದಾರೆ. 

ನೀವು ಮಾಡಿದ್ದೂ ಇದನ್ನೇ: ಸಚಿವ ಅನಂತ್‌ಕುಮಾರ್‌
ಕಾಂಗ್ರೆಸ್‌ ಆರೋಪಗಳಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಅನಂತ್‌ಕುಮಾರ್‌, “ಯುಪಿಎ ಸರಕಾರ ಕೂಡ ಅಧಿವೇಶನವನ್ನು 2 ಬಾರಿ ವಿಳಂಬ ಮಾಡಿತ್ತು. 2008 ಮತ್ತು 2013ರಲ್ಲಿ ಅಧಿವೇಶನವನ್ನು ತಡವಾಗಿ ನಡೆಸಲಾಗಿತ್ತು. ಕಾಂಗ್ರೆಸ್‌ ನಾಯಕರು ಮರೆವಿನ ರೋಗದಿಂದ ಬಳಲುತ್ತಿದ್ದಾರೆ. ಗುಜರಾತ್‌ ಮತ್ತು ಹಿಮಾಚಲದಲ್ಲಿ ಸೋಲುಣ್ಣುವ ಹತಾಶೆಯು ಕಾಂಗ್ರೆಸ್‌ನಿಂದ ಇಂಥ ಆರೋಪಗಳನ್ನು ಮಾಡಿಸುತ್ತಿದೆ’ ಎಂದಿದ್ದಾರೆ. ಜತೆಗೆ, ಡಿಸೆಂಬರ್‌ನಲ್ಲಿ ಅಧಿವೇಶನ ನಡೆಸುತ್ತೇವೆ. ಸದ್ಯದಲ್ಲೇ ಅದರ ದಿನಾಂಕವನ್ನು ಘೋಷಿಸುತ್ತೇವೆ ಎಂದೂ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.