ಶೀಘ್ರ ತಲಾಖ್ ನಿಷೇಧಕ್ಕೆ ಮಸೂದೆ?
Team Udayavani, Nov 22, 2017, 6:00 AM IST
ಹೊಸದಿಲ್ಲಿ: ಮುಸ್ಲಿಮರಲ್ಲಿ ಜಾರಿಯಲ್ಲಿರುವ ಒಂದೇ ಬಾರಿಗೆ ತ್ರಿವಳಿ ತಲಾಖ್ ಹೇಳುವ ಪದ್ಧತಿಗೆ ಕೊನೆ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, ಸಂಸತ್ನ ಚಳಿಗಾಲದ ಅಧಿವೇಶನದಲ್ಲೇ ಇದಕ್ಕೆ ಸಂಬಂಧಿಸಿದ ಮಸೂದೆ ಮಂಡಿಸಲು ನಿರ್ಧರಿಸಿದೆ.
ಒಮ್ಮೆಗೆ ಮೂರು ಬಾರಿ ತಲಾಖ್ ನೀಡುವ ಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕವೂ ಹಲವರು ಅದನ್ನೇ ಅನುಸರಿಸುತ್ತಿರು ವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂತಹ ತಲಾಖ್ ಅನ್ನು ಅಪರಾಧ ಎಂದು ಪರಿಗಣಿಸುವಂಥ ಕಾನೂನು ತರಲು ಅಥವಾ ಪ್ರಸ್ತುತ ಇರುವ ಕಾನೂನಿಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸಲು ಸಂಸದೀಯ ಸಮಿತಿ ರಚಿಸಲಾಗಿದೆ. ಸೂಕ್ತ ಕಾನೂನು ಜಾರಿ ಯಲ್ಲಿ ಇಲ್ಲದ ಕಾರಣ, ತ್ರಿವಳಿ
ತಲಾಖ್ನ ಸಂತ್ರಸ್ತೆಯರು ಅಸಹಾಯ ಕತೆಗೆ ಸಿಲುಕಿದ್ದಾರೆ. ಪೊಲೀಸರಿಗೆ ಕೂಡ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯ ವಾಗುತ್ತಿಲ್ಲ. ಹೀಗಾಗಿ, ಈ ನಿಟ್ಟಿನಲ್ಲಿ ಕಠಿನ ಕಾನೂನು ತರಲು ಸರಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಕುರಿತ ಮಸೂದೆ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ. ಒಂದೇ ಬಾರಿಗೆ ಹೇಳುವ ತ್ರಿವಳಿ ತಲಾಖ್ ಅಸಾಂವಿಧಾನಿಕ ಮತ್ತು ನಿರಂಕುಶ ಎಂದು ಹೇಳಿದ್ದ ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ ನಲ್ಲಿ ಈ ನಿಯಮವನ್ನು ರದ್ದು ಮಾಡಿ ಐತಿಹಾಸಿಕ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ