ಕಾಂಗ್ರೆಸ್ ಪಕ್ಷ ನಮ್ಮ ಬೇಡಿಕೆಗೆ ಒಪ್ಪಿದೆ: ಹಾರ್ದಿಕ್ ಘೋಷಣೆ
Team Udayavani, Nov 22, 2017, 11:40 AM IST
ಹೊಸದಿಲ್ಲಿ : ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿತವಾದ ತನ್ನ ಸಮುದಾಯದ ಬೇಡಿಕೆಗಳನ್ನು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ ಎಂದು ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಇಂದು ಬುಧವಾರ ಘೋಷಿಸಿದ್ದಾರೆ.
ಗುಜರಾತ್ ಚುನಾವಣೆಯಲ್ಲಿ ತಾನು ವಿಜಯಶಾಲಿಯಾದರೆ ಪಾಟಿದಾರ್ ಸಮುದಾಯದ ಮೀಸಲಾತಿ ಬೇಡಿಕೆಯನ್ನು ಪರಿಗಣಿಸುವುದಾಗಿ ಕಾಂಗ್ರೆಸ್ ತನಗೆ ಭರವಸೆ ಕೊಟ್ಟಿರುವುದಾಗಿ ಹಾರ್ದಿಕ್ ಪಟೇಲ್ ಅವರಿಂದು ಮಾಧ್ಯಮವನ್ನು ಉದ್ದೇಶಿಸಿ ಹೇಳಿದರು.
ಕೆಲವೊಂದು ಸಮುದಾಯಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ನೀಡಲಾಗಿದೆ ಎಂದು ಆರೋಪಿಸಿದ ಹಾರ್ದಿಕ್ ಪಟೇಲ್, “ಕಾಂಗ್ರೆಸ್ ಪಕ್ಷ ನಮ್ಮ ಸಂಬಂಧಿಯೇನೂ ಅಲ್ಲ; ಆದರೂ ಅದು ಒಬಿಸಿ ಕೋಟಾ ಸಮೀಕ್ಷೆಯನ್ನು ಕೈಗೊಳ್ಳುವುದಾಗಿ ಹೇಳಿದೆ’ ಎಂದು ತಿಳಿಸಿದರು.
ಪಟೇಲ್ ನಾಯಕರು ಕಾಂಗ್ರೆಸ್ ಪಕ್ಷದಿಂದ ಯಾವುದೇ ಟಿಕೆಟ್ ಬೇಕೆಂದು ಕೇಳಿಲ್ಲ; ನಮಗೆ ಬೇಕಿರುವುದು ಮೀಸಲಾತಿ ಮಾತ್ರ ಎಂದು ಹಾರ್ದಿಕ್ ಹೇಳಿದರು.
ಪಾಟಿದಾರ್ ಸಮುದಾಯಕ್ಕೆ ಬೇಕಿರುವುದು ಕಲಿಯುವ ಹಕ್ಕು ಮತ್ತು ಉದ್ಯೋಗ ಎಂದು 24ರ ಹರೆಯದ ಹಾರ್ದಿಕ್ ಪಟೇಲ್ ಹೇಳಿದರು
ಭಾರತೀಯ ಜನತಾ ಪಕ್ಷದ ಬಗ್ಗೆ ಮಾತನಾಡುತ್ತಾ ಹಾರ್ದಿಕ್ ಪಟೇಲ್, “ನಮಗೇನೂ ಆಡಳಿತ ಪಕ್ಷ ಬಿಜೆಪಿಯೊಂದಿಗೆ ಯಾವುದೇ ವೈರತ್ಯ ಇಲ್ಲ; ಆದರೆ ಬಿಜೆಪಿಗೆ ಗುಜರಾತಿನ 6 ಕೋಟಿ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ’ ಎಂದು ನೇರವಾಗಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ