ಜಯಲಲಿತಾ ಕ್ಷೇತ್ರಕ್ಕೆ ಡಿ.21 ಉಪ ಚುನಾವಣೆ, ಡಿ.24 ಮತ ಎಣಿಕೆ
Team Udayavani, Nov 24, 2017, 11:55 AM IST
ಹೊಸದಿಲ್ಲಿ : ತಮಿಳು ನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಆವರು 2016ರ ಡಿಸೆಂಬರ್ನಲ್ಲಿ ನಿಧನ ಹೊಂದಿದ ಕಾರಣ ತೆರವಾದ ತಮಿಳು ನಾಡಿನ ರಾಧಾಕೃಷ್ಣ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಡಿಸೆಂಬರ್ 21ರಂದು ನಡೆಯಲಿದೆ ಮತ್ತು ಡಿ.24ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಇವೇ ದಿನಾಂಕಗಳನ್ನು ಉತ್ತರ ಪ್ರದೇಶದ ಸಿಕಂದರಾ ಕ್ಷೇತ್ರ, ಪಶ್ಚಿಮ ಬಂಗಾಲದ ಸಬಾಂಗ್ ಕ್ಷೇತ್ರ ಮತ್ತು ಅರುಣಾಚಲದ ಪಕ್ಕೆ ಕಸಾಂಗ್ ಮತ್ತು ಲಿಕಬಾಲಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ ನಿಗದಿಸಲಾಗಿದೆ.
ಆರ್ ಕೆ ನಗರ ಉಪಚುನಾವಣೆಯನ್ನು ಈ ಹಿಂದೆ ಎಪ್ರಿಲ್ 10ಕ್ಕೆ ನಿಗದಿಸಲಾಗಿತ್ತು. ಆದರೆ ಓಟಿಗಾಗಿ ಭಾರೀ ಪ್ರಮಾಣದಲ್ಲಿ ನೋಟುಗಳನ್ನು ಹಂಚಲಾಗಿದೆ ಎಂಬ ವರದಿಗಳನ್ನು ಅನುಸರಿಸಿ ಎ.10ರ ಉಪ ಚುನಾವಣೆಯನ್ನು ರದ್ದು ಮಾಡಲಾಗಿತ್ತು.
ತಮಿಳು ನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರ ಸಂಘಟಿತ ಬಣಕ್ಕೆ ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಯನ್ನು ಚುನಾವಣಾ ಆಯೋಗವು ನೀಡಿದ ಒಂದು ದಿನದ ತರುವಾಯ ಆರ್ ಕೆ ನಗರ ಕ್ಷೇತ್ರಕ್ಕೆ ಉಪ ಚುನಾವಣೆ ನಿರ್ಧಾರವಾಗಿರುವುದು ಗಮನಾರ್ಹವಾಗಿದೆ.
ಈ ಉಪಚುನಾವಣೆಯಲ್ಲಿ ವಿ ಕೆ ಶಶಿಕಲಾ ಬಣದ ನೇತೃತ್ವ ಹೊಂದಿರುವ ಟಿ ಟಿ ವಿ ದಿನಕರನ್ ಅವರು ಸ್ಫರ್ಧಿಸುತ್ತಾರೆಯೇ ಇಲ್ಲವೇ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ