ನೂರಕ್ಕೂ ಅಧಿಕ ಆಂಧ್ರ ಶಾಸಕರ ಸಾಮೂಹಿಕ ರಜೆ ! ಯಾಕೆ ಗೊತ್ತಾ ?


Team Udayavani, Nov 24, 2017, 3:41 PM IST

Andhra-Assembly-700.jpg

ಹೈದರಾಬಾದ್‌ : ಆಂಧ್ರ ಪ್ರದೇಶ ವಿಧಾನಸಭಾ ಅಧಿವೇಶನ ಈಗ ಜಾರಿಯಲಿದೆ. ಆದರೂ ಕನಿಷ್ಠ ನೂರು ಮಂದಿ ಶಾಸಕರು ಒಮ್ಮೆಲೇ ಸಾಮೂಹಿಕ ರಜೆಗೆ ಅರ್ಜಿ ಹಾಕಿದ್ದಾರೆ. ಕಾರಣವೇನು ಗೊತ್ತಾ ? ಮದುವೆ ಸಮಾರಂಭಗಳಲ್ಲಿ ಭಾಗವಹಿಸುವುದಕ್ಕೆ ! 

ವಿಶೇಷವೆಂದರೆ ನೂರಕ್ಕೂ ಅಧಿಕ ಮಂದಿ ಶಾಸಕರು ಹಾಕಿರುವ ಸಾಮೂಹಿಕ ರಜೆಯನ್ನು ಸರಕಾರ ಮಂಜೂರು ಮಾಡಿದೆ‌. 

ಎನ್‌ಡಿಟಿವಿ ವರದಿ ಮಾಡಿರುವಂತೆ ಮುಂದಿನ ಕೆಲವು ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಸುಮಾರು 1.20 ಲಕ್ಷ ಮದುವೆಗಳು ನಡೆಯಲಿಕ್ಕಿವೆ. ಮದುವೆಗಳಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಸಾಮೂಹಿಕ ರಜೆ ಹಾಕಿರುವ ಶಾಸಕರು, ಅಧಿವೇಶನ ಕೊನೆಗೊಂಡ ಬಳಿಕ ಎರಡು ಹೆಚ್ಚುವರಿ ದಿನಗಳ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ವಿಧಾನಸಭಾ ಸ್ಪೀಕರ್‌ ಕೊಡೇಲಾ ಶಿವಪ್ರಸಾದ ರಾವ್‌ ಅವರು ನ.23ರಂದು “ಸದನವು ಈ ಗುರುವಾರ ಮತ್ತು ಶುಕ್ರವಾರ ಕಲಾಪ ನಡೆಸುವುದಿಲ್ಲ’ ಎಂದು ಪ್ರಕಟಿಸಿದ್ದಾರೆ. ‘ಈ ಎರಡು ದಿನ ಕಲಾಪ ನಡೆಸಬಾರದೆಂಬ ಶಾಸಕರ ಕೋರಿಕೆಯನ್ನು ಮನ್ನಿಸಲಾಗಿದೆ; ತಮಗೆ ಮದುವೆ ಸಮಾರಂಭಗಳಿಗೆ ಹೋಗುವುದಿದೆ ಎಂಬ ಅವರ ಕಾರಣವನ್ನು ಒಪ್ಪಿಕೊಳ್ಳಲಾಗಿದೆ’  ಎಂದು ಡಾ. ರಾವ್‌ ಹೇಳಿದರು. 

ಅಂತೆಯೇ ಆಂಧ್ರಪ್ರದೇಶ ವಿಧಾನಸಭೆಯು ಈಗಿನ್ನು ನ.28ರಂದು ಪುನರಾರಂಭಗೊಂಡು ವಾರಾಂತ್ಯದ ವರೆಗೂ ಕಲಾಪ ಕೈಗೊಳ್ಳಲಿದೆ.

ಆಂಧ್ರ ವಿಧಾನ ಸಭೆಯು ಕಳೆದ ವರ್ಷ ಮಾರ್ಚ್‌ನಲ್ಲಿ ಶಾಸಕರ ವೇತನ ಮತ್ತು ಇತರ ಭತ್ಯೆಗಳನ್ನು ಏರಿಸುವ ಮಸೂದೆಯನ್ನು ಮಂಜೂರು ಮಾಡಿತ್ತು. ಅದರ ಪ್ರಕಾರ ಪ್ರತಿಯೋರ್ವ ಶಾಸಕರ ಮಾಸಿಕ ವೇತನವನ್ನು ಆಗಿನ 95,000 ರೂ.ಗಳಿಂದ 1.25 ಲಕ್ಷ ರೂ.ಗೆ ಏರಿಸಲಾಗಿತ್ತು.

ಅದೇ ರೀತಿ ತಿಂಗಳ ವಾಸ್ತವ್ಯ ಭತ್ಯೆಯನ್ನು 25,000 ರೂ.ಗಳಿಂದ 50,000 ರೂ.ಗೆ ಏರಿಸಲಾಗಿತ್ತು. ನಿವೃತ್ತ ಶಾಸಕರ ಮಾಸಿಕ ಪಿಂಚಣಿಯನ್ನು ಕೂಡ 50,000 ರೂ.ಗೆ ಏರಿಸಲಾಗಿತ್ತು. ಇದಲ್ಲದೆ ಪ್ರತಿಯೋರ್ವ ಶಾಸಕರಿಗೆ ನಿಯತಕಾಲಿಕ ಹಾಗೂ ಪುಸ್ತಕ ಖರೀದಿಗೆಂದು ವರ್ಷಕ್ಕೆ 20,000 ರೂ. ನೀಡಲಾಗುತ್ತಿದೆ. 

ಮೋಟಾರ್‌ ಕಾರು/ವಸತಿ ಕಟ್ಟಡ ಮುಂಗಡವನ್ನು ದುಪ್ಪಟ್ಟು ಗೊಳಿಸಿ 20.00 ಲಕ್ಷ ರೂ.ಗೆ ನಿಗದಿಸಲಾಗಿದೆ. ಆದರೆ ಇದನ್ನು ಶಾಸಕರು ನಿಬಡ್ಡಿಯಾಗಿ ಮರುಪಾವತಿಸಬೇಕಿದೆ. 

ಆದರೆ ವೈಎಸ್‌ಆರ್‌ಸಿ ಸದಸ್ಯ ಕೋಟಮರೆಡ್ಡಿ ಶ್ರೀಧರ ರೆಡ್ಡಿ ಅವರು ಈ ಮಸೂದೆಯನ್ನು ವಿರೋಧಿಸಿ “ರಾಜ್ಯವು ತೀವ್ರವಾದ ಹಣಕಾಸು ಬಿಕ್ಕಟ್ಟನ್ನು ಎದುರಿಸುತ್ತಿರುವ ನಮಗೆ ನಾವೇ ನಮ್ಮ ಸಂಬಳವನ್ನು ಈ ಪರಿಯಾಗಿ ಹೆಚ್ಚಿಸಿಕೊಳ್ಳುವುದನ್ನು ಜನರು ಎಂದೂ ಮೆಚ್ಚುವುದಿಲ್ಲ; ಕ್ಷಮಿಸುವುದೂ ಇಲ್ಲ’ ಎಂದು ಹೇಳಿದ್ದರು. 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.