ದೋಷಿಗೂ ಪಕ್ಷದಲ್ಲಿ ಹುದ್ದೆ: ಸುಪ್ರೀಂ ನೋಟಿಸ್
Team Udayavani, Dec 2, 2017, 7:45 AM IST
ಹೊಸದಿಲ್ಲಿ: ದೋಷಿ ಎಂದು ಸಾಬೀತಾದ ಬಳಿಕವೂ ರಾಜಕೀಯ ಪಕ್ಷಗಳಲ್ಲಿ ಆಯಕಟ್ಟಿನ ಹುದ್ದೆ ಹೊಂದಿರುವುದು ಹಾಗೂ ಹುದ್ದೆಯಲ್ಲಿ ಮುಂದುವರಿಯುವುದಕ್ಕೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಮಾಡಿದೆ.
ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ, ಅರ್ಜಿ ವಿಚಾರಣೆ ನಡೆಸಲು ಒಪ್ಪಿಕೊಂಡಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಹಿರಿಯ ವಕೀಲರಾದ ಸಿದ್ಧಾರ್ಥ ಲೂಥಾÅ, ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.